ಅಖಿಲ್ ಗಿರಿ 
ದೇಶ

ಮಹಿಳಾ ಅರಣ್ಯಾಧಿಕಾರಿಗೆ ಬೆದರಿಕೆ: ಬಂಗಾಳದ ಸಚಿವ ರಾಜೀನಾಮೆ!

ಅಖಿಲ್ ಗಿರಿ ಅವರು ಅರಣ್ಯ ಸಂರಕ್ಷಣಾಧಿಕಾರಿ ಮನೀಶಾ ಸಾಹು ಅವರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಕೋಲ್ಕತ್ತ: ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪಶ್ಚಿಮ ಬಂಗಾಳದ ಜೈಲು ಸಚಿವ ಅಖಿಲ್ ಗಿರಿ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.

ರಾಮನಗರದ ಶಾಸಕರಾಗಿರುವ ಗಿರಿ ಅವರು ಅರಣ್ಯ ಸಂರಕ್ಷಣಾಧಿಕಾರಿ ಮನೀಶಾ ಸಾಹು ಅವರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ತದನಂತರ ಸಚಿವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹಾಗೂ ಮಹಿಳಾ ಅಧಿಕಾರಿ ಬಳಿ ಕ್ಷಮೆಯಾಚಿಸುವಂತೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸೂಚಿಸಲಾಗಿತ್ತು.

ಪುರ್ಬಾ ಮೇದಿನಿಪುರ ಜಿಲ್ಲೆಯ ಕಂಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿರಿ, ರಾಜೀನಾಮೆ ನೀಡುತ್ತೇನೆ ಆದರೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದರು. ತಾಜ್‌ಪುರ ಬಳಿಯ ಬೀಚ್ ಬಳಿ ಅರಣ್ಯ ಇಲಾಖೆಯ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಿದ ನಂತರ ಅವರ ಸೇವಾವಧಿಯನ್ನು ಕಡಿತಗೊಳಿಸುವುದಾಗಿ ಸಚಿವರು ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದರು.

ಪಕ್ಷದ ಸೂಚನೆಯಂತೆ ರಾಜ್ಯಾಧ್ಯಕ್ಷ ಸುಬ್ರತಾ ಬಕ್ಷಿ ಅವರು ಭಾನುವಾರ ಮಧ್ಯಾಹ್ನ ಅಖಿಲ್ ಗಿರಿಗೆ ಕರೆ ಮಾಡಿ, ಮಹಿಳಾ ಅಧಿಕಾರಿಗೆ ಕ್ಷಮೆಯಾಚಿಸುವಂತೆ ಮತ್ತು ತಕ್ಷಣವೇ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದರು ಎಂದು ಟಿಎಂಸಿ ವಕ್ತಾರ ಶಾಂತನು ಸೇನ್ ತಿಳಿಸಿದರು.

ಇಂದು ರಾತ್ರಿ ನನ್ನ ರಾಜೀನಾಮೆಯನ್ನು ಇಮೇಲ್ ಮಾಡುತ್ತೇನೆ. ನಾಳೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ವೈಯಕ್ತಿಕವಾಗಿ ಹಸ್ತಾಂತರಿಸುತ್ತೇನೆ" ಎಂದು ಅಲಿಖ್ ಗಿರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT