ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಸೇನೆಯಿಂದ ಶೋಧ ಕಾರ್ಯಾಚರಣೆ ಆರಂಭ

5 ಆಗಸ್ಟ್ 2019 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದು. ವಿಶೇಷ ಸ್ಥಾನಮಾನ ರದ್ದುಗೊಂಡು ಇಂದಿಗೆ 5 ವರ್ಷ ಕಳೆದಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಮತ್ತು ಸುಂದರ್‌ಬಾನಿ ಸೆಕ್ಟರ್‌ಗಳ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಸೋಮವಾರ ಗುಂಡಿನ ಕಾಳಗ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಡಿಯುದ್ದಕ್ಕೂ ನುಸುಳುಕೋರರ ಎರಡು ಗುಂಪುಗಳ ಚಲನವಲನವನ್ನು ಗಮನಿಸಿದ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ಎರಡೂ ಪ್ರದೇಶಗಳಲ್ಲಿ ಇದೀಗ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಂದು ಮುಂಜಾನೆ 1.30 ರ ಸುಮಾರಿಗೆ ಜಮ್ಮುವಿನ ಹೊರವಲಯದಲ್ಲಿರುವ ಅಖ್ನೂರ್‌ನ ಬತ್ತಲ್ ಸೆಕ್ಟರ್‌ನಲ್ಲಿ ಮೂರರಿಂದ ನಾಲ್ಕು ನುಸುಳುಕೋರರ ಅನುಮಾನಾಸ್ಪದ ಚಲನವಲನವನ್ನು ಪತ್ತೆಹಚ್ಚಿದ ನಂತರ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದ್ದವು ಎಂದು ತಿಳಿಸಿದ್ದಾರೆ.

ನುಸುಳುಕೋರರು ಪತ್ತೆಯಾದ ಬೆನ್ನಲ್ಲೇ ಸ್ಥಳದಲ್ಲಿ ಡ್ರೋನ್‌ಗಳ ಮೂಲಕ ಕಣ್ಗಾವಲು ಹೆಚ್ಚಿಸಲಾಗಿದೆ. ಶೋಧಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ರಜೌರಿ ಜಿಲ್ಲೆಯ ಸುಂದರ್‌ಬನಿ-ನೌಶೇರಾ ಸೆಕ್ಟರ್‌ನಲ್ಲಿಯೂ ಮಧ್ಯರಾತ್ರಿ 12.30ರ ಸುಮಾರಿಗೆ ಅನುಮಾನಾಸ್ಪದ ಚಲನವಲನಗಳು ಕಂಡು ಬಂದಿತ್ತು. ಅಲ್ಲಿಯೂ ಸೇನಾ ಪಡೆಗಳು ಕೆಲವು ಸುತ್ತಿನ ಗುಂಡು ಹಾರಿಸಿವೆ ಎಂದು ತಿಳಿದುಬಂದಿದೆ.

ಎಲ್‌ಒಸಿಯ ಉದ್ದಕ್ಕೂ ಇರುವ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

5 ಆಗಸ್ಟ್ 2019 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದು. ವಿಶೇಷ ಸ್ಥಾನಮಾನ ರದ್ದುಗೊಂಡು ಇಂದಿಗೆ 5 ವರ್ಷ ಕಳೆದಿದ್ದು, ಇದರ ನಡುವಲ್ಲೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಮ್ಮು-ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT