ಜಗ್ಗಿ ವಾಸುದೇವ್ 
ದೇಶ

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಎಂದಿಗೂ ಮಹಾ-ಭಾರತ ಆಗುವುದಿಲ್ಲ: ಸದ್ಗುರು

ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ.

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿರುವ ಸದ್ಗುರು ಜಗ್ಗಿ ವಾಸುದೇವ್‌, ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ ಎಂದಿದ್ದಾರೆ. ಬಾಂಗ್ಲಾದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲವಾದರೆ ಇಂಡಿಯಾ ಅಥವಾ ಭಾರತವು ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ‘ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಾತ್ರಿಪಡಿಸಲು ನಾವು ಆದಷ್ಟು ಬೇಗ ಎದ್ದುನಿಂತು ಕಾರ್ಯನಿರ್ವಹಿಸದಿದ್ದರೆ ಭಾರತವು ಮಹಾ–ಭಾರತವಾಗುವುದಿಲ್ಲ. ದುರದೃಷ್ಟವಶಾತ್‌ ಬಾಂಗ್ಲಾ ನಮ್ಮ ನೆರೆಯ ರಾಷ್ಟ್ರವಾಗಿದೆ. ನಮ್ಮ ನೆಲದ ನಾಗರಿಕರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಬಾಂಗ್ಲಾದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡುವಂತೆ ಮಾಡಿತು.ಹಿಂದೂಗಳು ಹಿಂಸಾಚಾರಕ್ಕೆ ಒಳಗಾದರು. ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ಮನೆಗಳು ಮತ್ತು ವ್ಯಾಪಾರ ಮಳಿಗೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ರೀತಿಯ ದುಷ್ಕೃತ್ಯಗಳಿಂದ ನಿಜವಾಗಿ ಭಾರತೀಯ ನಾಗರಿಕತೆಗೆ ಸೇರಿದವರನ್ನು ರಕ್ಷಿಸುವುದು ಭಾರತದ ಜವಾಬ್ದಾರಿಯಾಗಿದೆ ಎಂದು ಸದ್ಗುರು ಹೇಳಿದ್ದಾರೆ.

ಪ್ರಧಾನಿ ರಾಜೀನಾಮೆ ಬಳಿಕವೂ ಮೀಸಲಾತಿ ಹೋರಾಟ ಆಂದೋಲನ ನಡೆಸುತ್ತಿರುವವರು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಕುರಿತು ಸದ್ಗುರು ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT