ರಾಹುಲ್ ಗಾಂಧಿ 
ದೇಶ

ವಯನಾಡು ಭೂಕುಸಿತ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ರಾಹುಲ್ ಗಾಂಧಿ ಆಗ್ರಹ

ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ವಯನಾಡು ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಬೇಕು.

ನವದೆಹಲಿ: ಕೇರಳದ ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ವಯನಾಡು ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಬೇಕು. ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ಅಗತ್ಯ ಇದೆ ಎಂದು ಒತ್ತಿ ಹೇಳಿದರು.

"ನಾನು ವಯವನಾಡು ಭೂಕುಸಿತವನ್ನು ನನ್ನ ಕಣ್ಣಾರೆ ನೋಡಿದ್ದೇನೆ, ದುರಂತ ಸಂಭವಿಸಿದ ವಿವಿಧ ಸ್ಥಳಗಳಿಗೆ ನಾನು ಭೇಟಿ ನೀಡಿದ್ದೇನೆ. ಕೆಲವು ಕೆಲವು ಸ್ಥಳಗಳಲ್ಲಿ, ಇಡೀ ಕುಟುಂಬ ಕಣ್ಮರೆಯಾಗಿವೆ, ಇನ್ನು ಕೆಲವು ಕುಟುಂಬಗಳಲ್ಲಿ ಕೇವಲ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ದುರಂತದ ಸಂದರ್ಭದಲ್ಲಿ ನೆರವಾದವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

"ಭೀಕರ ಭೂಕುಸಿತದಲ್ಲಿ 200 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು ಅಪಾರ ಸಂಖ್ಯೆಯ ಜನ ಕಾಣೆಯಾಗಿದ್ದಾರೆ. ಅಂತಿಮವಾಗಿ ಮೃತರ ಸಂಖ್ಯೆ 400 ಮೀರಬಹುದು" ಎಂದು ರಾಹುಲ್ ಗಾಂಧಿ ಹೇಳಿದರು.

ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳ ನೆರವಿಗಾಗಿ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾದ ಕೇಂದ್ರ ಪಡೆಗಳು ಮತ್ತು ಸೇನೆಯ ಕಾರ್ಯವನ್ನು ಶ್ಲಾಘಿಸಿದ ರಾಹುಲ್ ಗಾಂಧಿ, ಇತರ ಸಮುದಾಯಗಳು ತೋರಿದ ಏಕತೆಯನ್ನು ಎತ್ತಿ ತೋರಿಸಿದರು.

"ವಿಭಿನ್ನ ಸಿದ್ಧಾಂತಗಳನ್ನು ಲೆಕ್ಕಿಸದೆ ಎಲ್ಲಾ ಸಮುದಾಯಗಳ ಜನ ಸಹಾಯ ಮಾಡಲು ಒಗ್ಗೂಡಿರುವುದನ್ನು ನೋಡಿ ಸಂತೋಷವಾಗಿದೆ" ಎಂದರು.

"ಇದು ಒಂದು ದೊಡ್ಡ ದುರಂತ"ವಾಗಿದ್ದು, ಸಮಗ್ರ ಪುನರ್ವಸತಿ ಪ್ಯಾಕೇಜ್ ಒದಗಿಸಬೇಕು ಮತ್ತು ವಿಪತ್ತು-ನಿರೋಧಕ ಮೂಲಸೌಕರ್ಯಗಳನ್ನು ನಿರ್ಮಿಸಲು ಮತ್ತು ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ರಾಹುಲ್ ಗಾಂಧಿ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

SCROLL FOR NEXT