ಕಿರಣ್ ರಿಜಿಜು online desk
ದೇಶ

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು) ಮಸೂದೆ, 2014 ನ್ನು ಹಿಂಪಡೆದ ಸರ್ಕಾರ

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು), ಮಸೂದೆ, 2014 ನ್ನು ಹಿಂದಿನ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ ರೆಹಮಾನ್ ಖಾನ್ ಅವರು ಫೆಬ್ರವರಿ 18, 2014 ರಂದು ರಾಜ್ಯಸಭೆಯಲ್ಲಿ ಮಂಡಿಸಿದ್ದರು.

ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಆ.08 ರಂದು ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು) ಮಸೂದೆ, 2014 ನ್ನು ಹಿಂಪಡೆದಿದೆ.

ವಕ್ಫ್ ಆಸ್ತಿಗಳಿಂದ ಅನಧಿಕೃತ ನಿವಾಸಿಗಳನ್ನು ಹೊರಹಾಕುವ ಕಾರ್ಯವಿಧಾನಕ್ಕೆ ಈ ಮಸೂದೆ ನೆರವಾಗಿತ್ತು. ಇದನ್ನು ಈಗ ಹಿಂಪಡೆಯುವುದಾಗಿ ರಾಜ್ಯಸಭೆಯಲ್ಲಿ ಸರ್ಕಾರ ಘೋಷಿಸಿದೆ.

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು), ಮಸೂದೆ, 2014 ನ್ನು ಹಿಂದಿನ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ ರೆಹಮಾನ್ ಖಾನ್ ಅವರು ಫೆಬ್ರವರಿ 18, 2014 ರಂದು ರಾಜ್ಯಸಭೆಯಲ್ಲಿ ಮಂಡಿಸಿದ್ದರು. ಇದನ್ನು ಮಾರ್ಚ್ 5, 2014 ರಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.

ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗಾಗಿ ಮೀಸಲಾದ ಸ್ವತ್ತುಗಳನ್ನು ವಕ್ಫ್ ಆಸ್ತಿಗಳು ಎಂದು ಉಲ್ಲೇಖಿಸಲಾಗುತ್ತದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಹಿಂಪಡೆಯಲು ಸದನದ ಅನುಮತಿ ಕೋರಿದರು ಮತ್ತು ಸದಸ್ಯರು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಹಿಂತೆಗೆದುಕೊಳ್ಳುವಿಕೆಯನ್ನು ಅಂಗೀಕರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

ಜೈಪುರ ಮಹಿಳೆ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ತಾಯಿಗೂ ಮೊದಲೇ ತಂದೆಯನ್ನೂ ಕೊಂದಿದ್ದಳೇ ಹಂತಕ ಪುತ್ರಿ? ಸೋದರಮಾವ ಹೇಳಿದ್ದೇನು?

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ