ಸುಪ್ರೀಂ ಕೋರ್ಟ್ 
ದೇಶ

ಎರಡು ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ: ನೀಟ್-ಪಿಜಿ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

ನಾವು ಪರೀಕ್ಷೆ ಮುಂದೂಡಿದರೆ ವಾರಾಂತ್ಯದಲ್ಲಿ ಎರಡು ಲಕ್ಷ ವಿದ್ಯಾರ್ಥಿಗಳು ಮತ್ತು ನಾಲ್ಕು ಲಕ್ಷ ಪೋಷಕರು ಕಣ್ಣೀರು ಹಾಕುತ್ತಾರೆ. ಈ ಅರ್ಜಿಗಳ ಹಿಂದೆ ಯಾರಿದ್ದಾರೆ ಎಂದು ನಮಗೆ ಗೊತ್ತಿಲ್ಲ’’ ಎಂದು ಪೀಠ ಹೇಳಿದೆ.

ನವದೆಹಲಿ: ಆಗಸ್ಟ್ 11 ರಂದು ನಿಗದಿಯಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನೀಟ್-ಪಿಜಿ ಪರೀಕ್ಷೆ ಮುಂದೂಡುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಐದು ವಿದ್ಯಾರ್ಥಿಗಳಿಗಾಗಿ ಎರಡು ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

"ಇಂತಹ ಪರೀಕ್ಷೆಯನ್ನು ನಾವು ಹೇಗೆ ಮುಂದೂಡಬಹುದು. ಸಂಜಯ್ ಹೆಗ್ಡೆ ಅವರೇ ಇತ್ತೀಚಿನ ದಿನಗಳಲ್ಲಿ ಜನ ಸುಖಾಸುಮ್ಮನೇ ಪರೀಕ್ಷೆ ಮುಂದೂಡುವಂತೆ ಕೋರಿ ಕೋರ್ಟ್ ಗೆ ಬರುತ್ತಾರೆ. ಇದು ಪರಿಪೂರ್ಣ ಜಗತ್ತಲ್ಲ. ನಾವು ಶೈಕ್ಷಣಿಕ ತಜ್ಞರಲ್ಲ. ತಾತ್ವಿಕವಾಗಿ, ನಾವು ಪರೀಕ್ಷೆಯನ್ನು ಮುಂದೂಡುವುದಿಲ್ಲ. ನಾವು ಪರೀಕ್ಷೆ ಮುಂದೂಡಿದರೆ ವಾರಾಂತ್ಯದಲ್ಲಿ ಎರಡು ಲಕ್ಷ ವಿದ್ಯಾರ್ಥಿಗಳು ಮತ್ತು ನಾಲ್ಕು ಲಕ್ಷ ಪೋಷಕರು ಕಣ್ಣೀರು ಹಾಕುತ್ತಾರೆ. ಈ ಅರ್ಜಿಗಳ ಹಿಂದೆ ಯಾರಿದ್ದಾರೆ ಎಂದು ನಮಗೆ ಗೊತ್ತಿಲ್ಲ’’ ಎಂದು ಪೀಠ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಸ್ನಾತಕೋತ್ತರ ಪದವಿ) (ನೀಟ್-ಪಿಜಿ)ಯನ್ನು ಮರು ನಿಗದಿಪಡಿಸುವ ಅಗತ್ಯವಿದೆ. ಏಕೆಂದರೆ ಬೆಳಗ್ಗೆ ಒಂದು ಮತ್ತು ಮಧ್ಯಾಹ್ನ ಒಂದು ಪರೀಕ್ಷೆ ಇದೆ.

ಅನೇಕ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ತಲುಪಲು ಅನಾನುಕೂಲವಾಗಿರುವ ನಗರಗಳನ್ನು ಹಂಚಲಾಗಿದೆ ಎಂದು ವಾದಿಸಿದರು.

ಈ ಮೊದಲು ಜೂನ್ 23 ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು "ಮುನ್ನೆಚ್ಚರಿಕೆ ಕ್ರಮ" ವಾಗಿ ನೀಟ್ ಪಿಜಿ ಪರೀಕ್ಷೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT