ಸುಪ್ರೀಂ ಕೋರ್ಟ್ 
ದೇಶ

ಎರಡು ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ: ನೀಟ್-ಪಿಜಿ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

ನಾವು ಪರೀಕ್ಷೆ ಮುಂದೂಡಿದರೆ ವಾರಾಂತ್ಯದಲ್ಲಿ ಎರಡು ಲಕ್ಷ ವಿದ್ಯಾರ್ಥಿಗಳು ಮತ್ತು ನಾಲ್ಕು ಲಕ್ಷ ಪೋಷಕರು ಕಣ್ಣೀರು ಹಾಕುತ್ತಾರೆ. ಈ ಅರ್ಜಿಗಳ ಹಿಂದೆ ಯಾರಿದ್ದಾರೆ ಎಂದು ನಮಗೆ ಗೊತ್ತಿಲ್ಲ’’ ಎಂದು ಪೀಠ ಹೇಳಿದೆ.

ನವದೆಹಲಿ: ಆಗಸ್ಟ್ 11 ರಂದು ನಿಗದಿಯಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನೀಟ್-ಪಿಜಿ ಪರೀಕ್ಷೆ ಮುಂದೂಡುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಐದು ವಿದ್ಯಾರ್ಥಿಗಳಿಗಾಗಿ ಎರಡು ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

"ಇಂತಹ ಪರೀಕ್ಷೆಯನ್ನು ನಾವು ಹೇಗೆ ಮುಂದೂಡಬಹುದು. ಸಂಜಯ್ ಹೆಗ್ಡೆ ಅವರೇ ಇತ್ತೀಚಿನ ದಿನಗಳಲ್ಲಿ ಜನ ಸುಖಾಸುಮ್ಮನೇ ಪರೀಕ್ಷೆ ಮುಂದೂಡುವಂತೆ ಕೋರಿ ಕೋರ್ಟ್ ಗೆ ಬರುತ್ತಾರೆ. ಇದು ಪರಿಪೂರ್ಣ ಜಗತ್ತಲ್ಲ. ನಾವು ಶೈಕ್ಷಣಿಕ ತಜ್ಞರಲ್ಲ. ತಾತ್ವಿಕವಾಗಿ, ನಾವು ಪರೀಕ್ಷೆಯನ್ನು ಮುಂದೂಡುವುದಿಲ್ಲ. ನಾವು ಪರೀಕ್ಷೆ ಮುಂದೂಡಿದರೆ ವಾರಾಂತ್ಯದಲ್ಲಿ ಎರಡು ಲಕ್ಷ ವಿದ್ಯಾರ್ಥಿಗಳು ಮತ್ತು ನಾಲ್ಕು ಲಕ್ಷ ಪೋಷಕರು ಕಣ್ಣೀರು ಹಾಕುತ್ತಾರೆ. ಈ ಅರ್ಜಿಗಳ ಹಿಂದೆ ಯಾರಿದ್ದಾರೆ ಎಂದು ನಮಗೆ ಗೊತ್ತಿಲ್ಲ’’ ಎಂದು ಪೀಠ ಹೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಸ್ನಾತಕೋತ್ತರ ಪದವಿ) (ನೀಟ್-ಪಿಜಿ)ಯನ್ನು ಮರು ನಿಗದಿಪಡಿಸುವ ಅಗತ್ಯವಿದೆ. ಏಕೆಂದರೆ ಬೆಳಗ್ಗೆ ಒಂದು ಮತ್ತು ಮಧ್ಯಾಹ್ನ ಒಂದು ಪರೀಕ್ಷೆ ಇದೆ.

ಅನೇಕ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ತಲುಪಲು ಅನಾನುಕೂಲವಾಗಿರುವ ನಗರಗಳನ್ನು ಹಂಚಲಾಗಿದೆ ಎಂದು ವಾದಿಸಿದರು.

ಈ ಮೊದಲು ಜೂನ್ 23 ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು "ಮುನ್ನೆಚ್ಚರಿಕೆ ಕ್ರಮ" ವಾಗಿ ನೀಟ್ ಪಿಜಿ ಪರೀಕ್ಷೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT