ಮಗು ಮೇಲೆ ಬಿದ್ದ ದೈತ್ಯಕಾರದ ನಾಯಿ 
ದೇಶ

Video: 5ನೇ ಅಂತಸ್ತಿನಿಂದ ಕೆಳಗೆ ಹಾರಿದ ನಾಯಿ ಬಿದ್ದು 3 ವರ್ಷದ ಮಗು ಸಾವು, ಮಾಲೀಕನ ಬಂಧನ

ದೈತ್ಯಾಕಾರದ ನಾಯಿ ಬಿದ್ದ ರಭಸಕ್ಕೆ ಮೂರು ವರ್ಷದ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಥಾಣೆ: ತಾಯಿಯೊಂದಿಗೆ ರಸ್ತೆಯಲ್ಲಿ ಸಾಗುತ್ತಿದ್ದ ಪುಟ್ಟ ಮಗುವಿನ ನಾಯಿಯೊಂದು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮುಂಬೈ ವರದಿಯಾಗಿದ್ದು, ಪೊಲೀಸರು ನಾಯಿ ಮಾಲೀಕನನ್ನು ಬಂಧಿಸಿದ್ದಾರೆ.

ಮುಂಬೈ ಮಹಾನಗರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ದೈತ್ಯಾಕಾರದ ನಾಯಿ ಬಿದ್ದ ರಭಸಕ್ಕೆ ಮೂರು ವರ್ಷದ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಮುಂಬೈನ ಮುಂಬ್ರಾ ಬಳಿಯ ಅಮೃತ್ ನಗರದ ಚಿರಾಗ್ ಮೆನ್ಸನ್ ಎಂಬ ಐದು ಅಂತಸ್ತಿನ ಕಟ್ಟಡದ ಫ್ಲ್ಯಾಟ್ ವೊಂದರಲ್ಲಿ ನಾಯಿ ಸಾಕಲಾಗಿತ್ತು.

ಈ ನಾಯಿ ಮಂಗಳವಾರ ಸಂಜೆ ನಾಲ್ಕು ಗಂಟೆ ಹೊತ್ತಿಗೆ ಆಟವಾಡುತ್ತಾ ರಸ್ತೆಯ ಮೇಲೆ ಹಠಾತ್ ಎಗರಿ ಬಿದ್ದಿದೆ. ಈ ವೇಳೆ ಅಜ್ಜಿ ಹಾಗೂ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಮಗು ನಾಯಿಯ ಅಡಿಯಲ್ಲಿ ಸಿಲುಕಿದೆ.

ದೈತ್ಯ ನಾಯಿ ಬಿದ್ದ ರಭಸಕ್ಕೆ ಮಗು ಕೆಳಗೆ ಅಪ್ಪಚ್ಚಿಯಾಗಿದ್ದು, ನಿತ್ರಾಣವಾಗಿದೆ. ಕೂಡಲೇ ಮಗುವನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಕೆಲ ಹೊತ್ತು ನಿತ್ರಾಣವಾಗಿದ್ದ ನಾಯಿ ಬಳಿಕ ಎಚ್ಚರಗೊಂಡು ಅಲ್ಲಿಂದ ಹೊರಟು ಹೋಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ 3 ವರ್ಷದ ಮಗು ಸಾವನ್ನಪ್ಪಿದೆ. ನಾಯಿಯಿಂದಾಗಿ ಹೆತ್ತ ಕಂದಮ್ಮನನ್ನು ಕಳೆದುಕೊಂಡ ಕುಟುಂಬಸ್ಥರ ರೋಧನೆ ಮುಗಿಲುಮುಟ್ಟಿದೆ.

ನಾಯಿಗೂ ಬೆನ್ನು ಮೂಳೆ ಮುರಿತ

ಮೂರು ವರ್ಷದ ಮಗುವಿನ ಸಾವಿಗೆ ಕಾರಣವಾದ ನಾಯಿಯನ್ನು ಚಿರಾಗ್ ಮೆನ್ಸನ್ ನ ನಿವಾಸಿ ಜೈದ್ ಸೈಯ್ಯದ್ ಎಂಬುವರು ಸಾಕಿದ್ದರು. ಆದರೆ ಅವರ ನಾಯಿ ಐದನೇ ಮಹಡಿಯ ಮನೆಯಿಂದ ನಾಯಿ ರಸ್ತೆಗೆ ಏಕಾಏಕಿ ಬಿದ್ದಿದ್ದು ಹೇಗೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನೂ ಐದನೇ ಮಹಡಿಯಿಂದ ಬಿದ್ದ ನಾಯಿಯೂ ಗಾಯಗೊಂಡಿದ್ದು, ಅದರ ಬೆನ್ನಿನ ಮೂಳೆ ಮುರಿದಿದೆ. ನಾಯಿಯನ್ನು ಪ್ರಾಣಿ ದಯಾ ಸಂಘದವರ ಸಹಾಯದೊಂದಿಗೆ ಪಶು ಚಿಕಿತ್ಸಾಲಯಕ್ಕೆ ದಾಖಲಿಸಲಾಗಿದ್ದು, ನಾಯಿಗೂ ಚಿಕಿತ್ಸೆ ನಡೆದಿದೆ.

ಮಾಲೀಕನ ಬಂಧನ

ಇನ್ನು ಮಗು ಸಾವು ಬೆನ್ನಲ್ಲೇ ನಾಯಿಯ ಮಾಲೀಕ ಮತ್ತು ಇತರ ಮೂವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಮುಂಬ್ರಾ ಪೊಲೀಸರು ಇದೀಗ ನಾಯಿ ಮಾಲೀಕರನ್ನು ಬಂಧಿಸಿದ್ದಾರೆ. ಕೊಲೆಗೆ ಸಮನಾಗದ ತಪ್ಪಿತಸ್ಥ ಹತ್ಯೆ, ನಿರ್ಲಕ್ಷ್ಯದಿಂದ ಸಾವು, ಪ್ರಾಣಿಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವರ್ತನೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!