ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ವಯನಾಡು ಭೂಕುಸಿತ: 11 ದಿನಗಳ ನಂತರ ನಾಲ್ವರ ಮೃತ ದೇಹ ಪತ್ತೆ; ಗೂಂದಲ ಸೃಷ್ಟಿಸಿದ ನಿಗೂಢ ಸದ್ದು!

ವಯನಾಡು ಜಿಲ್ಲೆಯ ಅಂಬಲವಾಯಲ್ ಪ್ರದೇಶದಲ್ಲಿ ಕೆಲವು ಸ್ಫೋಟಗಳು ವರದಿಯಾಗಿವೆ. ವಯನಾಡಿನ ಜಮ್ಶೀದ್ ಪ್ರಕಾರ, ಬೆಳಿಗ್ಗೆ 10.45 ರ ಸುಮಾರಿಗೆ ಸ್ಫೋಟಗಳು ವರದಿಯಾಗಿವೆ.

ಪುಂಚಿರಿ ಮಟ್ಟಂ: ವಿನಾಶಕಾರಿ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನಲ್ಲಿ 11 ದಿನಗಳ ಬಳಿಕ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಸೂಚಿಪಾರ ಮತ್ತು ಕಂಠಪಾರ ಜಲಪಾತಗಳ ನಡುವಿನ ಪ್ರದೇಶದಿಂದ ವಶಕ್ಕೆ ಪಡೆಯಲಾದ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿವೆ. ಅವುಗಳನ್ನು ಏರ್ ಲಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಸೇನೆ ಶೋಧ ಕಾರ್ಯ ಮುಗಿಸಿ ವಾಪಸ್ಸಾಗಿದೆ. ಆದರೆ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆ, ಪೊಲೀಸರು ಮತ್ತು ಸ್ವಯಂಸೇವಕರು ಭೂ ಕುಸಿತ ಪೀಡಿತ ಪ್ರದೇಶದಲ್ಲಿ ಶೋಧವನ್ನು ಮುಂದುವರೆಸಿದ್ದಾರೆ. ಶುಕ್ರವಾರ ಪುಂಚಿರಿ ಮಟ್ಟಂ ಮತ್ತಿತರ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ.

ಪುಂಚಿರಿ ಮಟ್ಟಂನಲ್ಲಿ ಶೋಧ ಕಾರ್ಯಕ್ಕೆ ಅರ್ಥ್ ಮೂವರ್ಸ್ ನೆರವು ನೀಡುತ್ತಿದ್ದಾರೆ. ಜುಲೈ 30 ರಂದು ದೇವರನಾಡು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಇಲ್ಲಿಯವರೆಗೆ ಸುಮಾರು 230 ಜನರು ಬಲಿಯಾಗಿದ್ದಾರೆ.

ಅಂಬಲವಾಯಲ್‌ನಲ್ಲಿ ನಿಗೂಢ ಸದ್ದು? ಈ ಮಧ್ಯೆ ವಯನಾಡು ಜಿಲ್ಲೆಯ ಅಂಬಲವಾಯಲ್ ಪ್ರದೇಶದಲ್ಲಿ ಕೆಲವು ಸ್ಫೋಟಗಳು ವರದಿಯಾಗಿವೆ. ವಯನಾಡಿನ ಜಮ್ಶೀದ್ ಪ್ರಕಾರ, ಬೆಳಿಗ್ಗೆ 10.45 ರ ಸುಮಾರಿಗೆ ಸ್ಫೋಟಗಳು ವರದಿಯಾಗಿವೆ.

ಭೂಮಿಯ ಕೆಳಗಿನಿಂದ ನಿಗೂಢವಾದ ಸದ್ದು ಕೇಳಿಸಿತು ಎಂದು ಸ್ಥಳೀಯ ಜನರು ಹೇಳಿದರು. ಇದು ದೃಢಪಡದೆ ಜನರಲ್ಲಿ ಗೊಂದಲ ಮೂಡಿಸಿದ್ದು, ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಅನಪಾರ, ತಜತುವಾಯಲ್ ಮತ್ತು ಎಡಕ್ಕಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಅಂಬಲವಾಯಲ್ ಜಿಎಲ್‌ಪಿ ಶಾಲೆಗೆ ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್!

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್