ರಕ್ಷಣಾ ಕಾರ್ಯಾಚರಣೆ ಚಿತ್ರ 
ದೇಶ

ವಯನಾಡು ಭೂಕುಸಿತ: 11 ದಿನಗಳ ನಂತರ ನಾಲ್ವರ ಮೃತ ದೇಹ ಪತ್ತೆ; ಗೂಂದಲ ಸೃಷ್ಟಿಸಿದ ನಿಗೂಢ ಸದ್ದು!

ವಯನಾಡು ಜಿಲ್ಲೆಯ ಅಂಬಲವಾಯಲ್ ಪ್ರದೇಶದಲ್ಲಿ ಕೆಲವು ಸ್ಫೋಟಗಳು ವರದಿಯಾಗಿವೆ. ವಯನಾಡಿನ ಜಮ್ಶೀದ್ ಪ್ರಕಾರ, ಬೆಳಿಗ್ಗೆ 10.45 ರ ಸುಮಾರಿಗೆ ಸ್ಫೋಟಗಳು ವರದಿಯಾಗಿವೆ.

ಪುಂಚಿರಿ ಮಟ್ಟಂ: ವಿನಾಶಕಾರಿ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನಲ್ಲಿ 11 ದಿನಗಳ ಬಳಿಕ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಸೂಚಿಪಾರ ಮತ್ತು ಕಂಠಪಾರ ಜಲಪಾತಗಳ ನಡುವಿನ ಪ್ರದೇಶದಿಂದ ವಶಕ್ಕೆ ಪಡೆಯಲಾದ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿವೆ. ಅವುಗಳನ್ನು ಏರ್ ಲಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಸೇನೆ ಶೋಧ ಕಾರ್ಯ ಮುಗಿಸಿ ವಾಪಸ್ಸಾಗಿದೆ. ಆದರೆ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆ, ಪೊಲೀಸರು ಮತ್ತು ಸ್ವಯಂಸೇವಕರು ಭೂ ಕುಸಿತ ಪೀಡಿತ ಪ್ರದೇಶದಲ್ಲಿ ಶೋಧವನ್ನು ಮುಂದುವರೆಸಿದ್ದಾರೆ. ಶುಕ್ರವಾರ ಪುಂಚಿರಿ ಮಟ್ಟಂ ಮತ್ತಿತರ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ.

ಪುಂಚಿರಿ ಮಟ್ಟಂನಲ್ಲಿ ಶೋಧ ಕಾರ್ಯಕ್ಕೆ ಅರ್ಥ್ ಮೂವರ್ಸ್ ನೆರವು ನೀಡುತ್ತಿದ್ದಾರೆ. ಜುಲೈ 30 ರಂದು ದೇವರನಾಡು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಇಲ್ಲಿಯವರೆಗೆ ಸುಮಾರು 230 ಜನರು ಬಲಿಯಾಗಿದ್ದಾರೆ.

ಅಂಬಲವಾಯಲ್‌ನಲ್ಲಿ ನಿಗೂಢ ಸದ್ದು? ಈ ಮಧ್ಯೆ ವಯನಾಡು ಜಿಲ್ಲೆಯ ಅಂಬಲವಾಯಲ್ ಪ್ರದೇಶದಲ್ಲಿ ಕೆಲವು ಸ್ಫೋಟಗಳು ವರದಿಯಾಗಿವೆ. ವಯನಾಡಿನ ಜಮ್ಶೀದ್ ಪ್ರಕಾರ, ಬೆಳಿಗ್ಗೆ 10.45 ರ ಸುಮಾರಿಗೆ ಸ್ಫೋಟಗಳು ವರದಿಯಾಗಿವೆ.

ಭೂಮಿಯ ಕೆಳಗಿನಿಂದ ನಿಗೂಢವಾದ ಸದ್ದು ಕೇಳಿಸಿತು ಎಂದು ಸ್ಥಳೀಯ ಜನರು ಹೇಳಿದರು. ಇದು ದೃಢಪಡದೆ ಜನರಲ್ಲಿ ಗೊಂದಲ ಮೂಡಿಸಿದ್ದು, ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಅನಪಾರ, ತಜತುವಾಯಲ್ ಮತ್ತು ಎಡಕ್ಕಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಅಂಬಲವಾಯಲ್ ಜಿಎಲ್‌ಪಿ ಶಾಲೆಗೆ ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT