ನಿತಿನ್ ಗಡ್ಕರಿ 
ದೇಶ

ಕಾನೂನು ಸುವ್ಯವಸ್ಥೆ ಸುಧಾರಿಸದಿದ್ದರೆ ಹೆದ್ದಾರಿ ಯೋಜನೆಗಳು ಸ್ಥಗಿತ: ಪಂಜಾಬ್ ಸರ್ಕಾರಕ್ಕೆ ಗಡ್ಕರಿ ಎಚ್ಚರಿಕೆ

ಈ ಸಂಬಂಧ ಗಡ್ಕರಿ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಪತ್ರ ಬರೆದಿದ್ದು, ದೆಹಲಿ-ಕತ್ರಾ ಎಕ್ಸ್‌ಪ್ರೆಸ್‌ವೇ ಯೋಜನೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಎರಡು ಘಟನೆಗಳ ಉಲ್ಲೇಖಿಸಿದ್ದಾರೆ.

ನವದೆಹಲಿ: ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸದಿದ್ದಲ್ಲಿ ಪಂಜಾಬ್‌ನಲ್ಲಿ 14,288 ಕೋಟಿ ರೂಪಾಯಿ ವೆಚ್ಚದ ಒಟ್ಟು 293 ಕಿ.ಮೀ ಉದ್ದದ ಎಂಟು ತೀವ್ರ ಬಾಧಿತ ಹೆದ್ದಾರಿ ಯೋಜನೆಗಳನ್ನು ರದ್ದುಗೊಳಿಸಲಾಗುವುದು ಅಥವಾ ಸ್ಥಗಿತಗೊಳಿಸಲಾಗುವುದು ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಪಂಜಾಬ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಗಡ್ಕರಿ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಪತ್ರ ಬರೆದಿದ್ದು, ದೆಹಲಿ-ಕತ್ರಾ ಎಕ್ಸ್‌ಪ್ರೆಸ್‌ವೇ ಯೋಜನೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಎರಡು ಘಟನೆಗಳ ಉಲ್ಲೇಖಿಸಿದ್ದಾರೆ.

"ಜಲಂಧರ್ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಗುತ್ತಿಗೆದಾರರ ಇಂಜಿನಿಯರ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದರೂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ" ಎಂದು ಗಡ್ಕರಿ ಅವರು ಆಗಸ್ಟ್ 9ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿ-ಕತ್ರಾ ಎಕ್ಸ್‌ಪ್ರೆಸ್‌ವೇಯ ಗುತ್ತಿಗೆದಾರರ ಯೋಜನಾ ಶಿಬಿರದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ ಮತ್ತು ಯೋಜನಾ ಶಿಬಿರವನ್ನು ಮತ್ತು ಅವರ ಸಿಬ್ಬಂದಿಯನ್ನು ಜೀವಂತವಾಗಿ ಸುಡುವುದಾಗಿ ಎಂಜಿನಿಯರ್‌ಗಳಿಗೆ ಬೆದರಿಕೆ ಹಾಕಿದ ಲೂಧಿಯಾನ ಜಿಲ್ಲೆಯ ಮತ್ತೊಂದು ಘಟನೆಯನ್ನು ಕೇಂದ್ರ ಸಚಿವರು ಉಲ್ಲೇಖಿಸಿದ್ದಾರೆ.

ಆದರೆ, ಈ ಸಂಬಂಧ ಎನ್‌ಎಚ್‌ಎಐ ಅಧಿಕಾರಿಗಳು ಲಿಖಿತ ಮನವಿ ಮಾಡಿದರೂ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಮತ್ತು ದುಷ್ಕರ್ಮಿಗಳನ್ನು ಬಂಧಿಸಿಲ್ಲ ಎಂದು ಅವರು ಹೇಳಿದ್ದಾರೆ.

"ಪರಿಸ್ಥಿತಿ ಸುಧಾರಿಸದಿದ್ದರೆ, 14,288 ಕೋಟಿ ರೂಪಾಯಿ ವೆಚ್ಚದ ಒಟ್ಟು 293 ಕಿಮೀ ಉದ್ದದ ತೀವ್ರ ಪೀಡಿತ 8 ಯೋಜನೆಗಳನ್ನು ರದ್ದುಗೊಳಿಸುವುದು/ಸ್ಥಗಿತಗೊಳಿಸುವುದನ್ನು ಬಿಟ್ಟು NHAI ಗೆ ಬೇರೆ ದಾರಿ ಇಲ್ಲ. ಇದರಿಂದ ಇಡೀ ಕಾರಿಡಾರ್ ನಿಷ್ಪ್ರಯೋಜಕವಾಗಲಿದೆ" ಎಂದು ಗಡ್ಕರಿ ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT