ಸಾಂದರ್ಭಿಕ ಚಿತ್ರ 
ದೇಶ

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 2.30 ಲಕ್ಷ ಕೋಟಿ ರು. ಆರ್ಥಿಕ ನೆರವಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮೂಲಕ 5 ವರ್ಷಗಳಲ್ಲಿ ನಗರ ಪ್ರದೇಶಗಳಲ್ಲಿ ಕೈಗೆಟುಕುವ ದರದಲ್ಲಿ ಮನೆಯನ್ನು ನಿರ್ಮಿಸಲು, ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಯಡಿ ಸರಕಾರ 2.30 ಲಕ್ಷ ಕೋಟಿ ರೂ.ಗಳ ಆರ್ಥಿಕ ನೆರವು ನೀಡಲಿದೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (ಪಿಎಂಎವೈ-ನಗರ) 2.0 ಕ್ಕೆ ಅನುಮೋದನೆ ನೀಡಿತು.

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮೂಲಕ 5 ವರ್ಷಗಳಲ್ಲಿ ನಗರ ಪ್ರದೇಶಗಳಲ್ಲಿ ಕೈಗೆಟುಕುವ ದರದಲ್ಲಿ ಮನೆಯನ್ನು ನಿರ್ಮಿಸಲು, ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಯಡಿ ಸರಕಾರ 2.30 ಲಕ್ಷ ಕೋಟಿ ರೂ.ಗಳ ಆರ್ಥಿಕ ನೆರವು ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಯೋಜನೆಯ ಅಡಿಯಲ್ಲಿ, ಮನೆ ಇಲ್ಲದ ಆರ್ಥಿಕವಾಗಿ ದುರ್ಬಲ ವಿಭಾಗ (EWS), ಕಡಿಮೆ ಆದಾಯದ ಗುಂಪು (LIG) ಅಥವಾ ಮಧ್ಯಮ ಆದಾಯ ಗುಂಪು (MIG) ವಿಭಾಗಗಳಿಗೆ ಸೇರಿದ ಕುಟುಂಬಗಳು ಮನೆ ಖರೀದಿಸಲು ಅಥವಾ ನಿರ್ಮಿಸಲು ಅರ್ಹರಾಗಿರುತ್ತಾರೆ.

ನಗರ ಪ್ರದೇಶಗಳಲ್ಲಿನ ಎಲ್ಲಾ ಅರ್ಹ ಫಲಾನುಭವಿಗಳಿಗೆ ಎಲ್ಲಾ ಹವಾಮಾನದಲ್ಲಿಯೂ ವಾಸಿಸಲು ಯೋಗ್ಯವಾದ ಮನೆಗಳನ್ನು ಒದಗಿಸಲು ಸರ್ಕಾರವು ಜಾರಿಗೊಳಿಸುತ್ತಿರುವ ಪ್ರಮುಖ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದರಡಿ 1.18 ಕೋಟಿ ಮನೆಗಳು ಮಂಜೂರಾಗಿದ್ದು, ಈಗಾಗಲೇ 85.5 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿ ವಿತರಿಸಲಾಗಿದೆ. ಇಡಬ್ಲ್ಯುಎಸ್ ಕುಟುಂಬಗಳು ವಾರ್ಷಿಕ ಆದಾಯ 3 ಲಕ್ಷ ರೂ.ವರೆಗಿನ ಕುಟುಂಬಗಳಾಗಿವೆ. ಎಲ್‌ ಐ ಜಿ ಕುಟುಂಬಗಳು 3 ಲಕ್ಷದಿಂದ 6 ಲಕ್ಷ ರೂ.ವರೆಗೆ ವಾರ್ಷಿಕ ಆದಾಯವಿರುವ ಕುಟುಂಬಗಳಾಗಿವೆ.ಎಂ ಐ ಜಿ ಕುಟುಂಬಗಳು ವಾರ್ಷಿಕ ಆದಾಯ 6 ಲಕ್ಷದಿಂದ 9 ಲಕ್ಷ ರೂ.ವರೆಗಿನ ಕುಟುಂಬಗಳಾಗಿವೆ.

2011 ರ ಜನಗಣತಿಯ ಪ್ರಕಾರ ಎಲ್ಲಾ ಶಾಸನಬದ್ಧ ಪಟ್ಟಣಗಳು ​​ಮತ್ತು ಅಧಿಸೂಚಿತ ಯೋಜನಾ ಪ್ರದೇಶಗಳು, ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ/ವಿಶೇಷ ಪ್ರದೇಶಾಭಿವೃದ್ಧಿ ಪ್ರಾಧಿಕಾರ/ನಗರಾಭಿವೃದ್ಧಿ ಪ್ರಾಧಿಕಾರ ಅಥವಾ ರಾಜ್ಯ ಶಾಸನದ ಅಡಿಯಲ್ಲಿ ಬರುವ ಅಧಿಸೂಚಿತ ಯೋಜನೆ/ಅಭಿವೃದ್ಧಿ ಪ್ರದೇಶದ ವ್ಯಾಪ್ತಿಯೊಳಗೆ ಬರುವ ಪ್ರದೇಶಗಳು ಸೇರಿದಂತೆ ನಂತರ ಅಧಿಸೂಚಿಸಲಾದ ಪಟ್ಟಣಗಳನ್ನು ಪಿಎಂಎವೈ-ನಗರ 2.0 ಅಡಿಯಲ್ಲಿ ಸೇರಿಸಲಾಗಿದೆ.

ಒಟ್ಟು 24,657 ಕೋಟಿ ರೂ.ಅಂದಾಜು ವೆಚ್ಚದ ರೈಲ್ವೆ ಸಚಿವಾಲಯದ ಎಂಟು ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯುಅನುಮೋದನೆ ನೀಡಿದ್ದು, ಯೋಜನೆಗಳು ಸಂಪರ್ಕವನ್ನು ಹೆಚ್ಚಿಸುವುದು, ಪ್ರಯಾಣವನ್ನು ಸುಲಭಗೊಳಿಸುವುದು, ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ತೈಲ ಆಮದುಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿವೆ. ಈ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ , ಕ್ಯಾಬಿನೆಟ್ ಅನುಮೋದಿಸಿದ ರೈಲ್ವೆಯ ಒಟ್ಟು ಯೋಜನೆಗಳು 2030-31 ರ ವೇಳೆಗೆ ಪೂರ್ಣಗೊಳ್ಳಲಿದ್ದು, ಅವುಗಳ ನಿರ್ಮಾಣ ಹಂತಗಳಲ್ಲಿ ಸುಮಾರು 3 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗುವುದು ಎಂದು ಹೇಳಿದರು. ಈ ಯೋಜನೆಗಳು ಪ್ರಧಾನಿಯವರ ನವ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿವೆ, ಇದು ಸಮಗ್ರ ಅಭಿವೃದ್ಧಿಯ ಮೂಲಕ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತದೆ" ಎಂದು ವೈಷ್ಣವ್ ಹೇಳಿದರು. ಈ ಎಂಟು ಯೋಜನೆಗಳು ಒಡಿಶಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜಾರ್ಖಂಡ್, ಬಿಹಾರ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದ ಏಳು ರಾಜ್ಯಗಳ 14 ಜಿಲ್ಲೆಗಳನ್ನು ಒಳಗೊಳ್ಳಲಿವೆ.

ತೋಟಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಲು ಕ್ಲೀನ್ ಪ್ಲಾಂಟ್ ಕಾರ್ಯಕ್ರಮಕ್ಕಾಗಿ 1,765 ಕೋಟಿ ರೂ.ಗೆ ಸಂಪುಟ ಅನುಮೋದನೆ ನೀಡಿದೆ. ತೋಟಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಾಗಿ ಕ್ಲೀನ್ ಪ್ಲಾಂಟ್ ಕಾರ್ಯಕ್ರಮಕ್ಕಾಗಿ 1,765 ಕೋಟಿ ರೂ.ಗೆ ಸಂಪುಟ ಅನುಮೋದನೆ ನೀಡಿದೆ. ಕ್ಲೀನ್ ಪ್ಲಾಂಟ್ ಕಾರ್ಯಕ್ರಮವು ವೈರಸ್-ಮುಕ್ತ, ಉತ್ತಮ ಗುಣಮಟ್ಟದ ನಾಟಿ ಮಾಡುವ ಸಾಮಗ್ರಿಗಳನ್ನು ಒದಗಿಸುತ್ತದೆ, ಇದು ಹೆಚ್ಚಿನ ಬೆಳೆ ಇಳುವರಿ ಮತ್ತು ಸುಧಾರಿತ ಆದಾಯದ ಅವಕಾಶಗಳಿಗೆ ಕಾರಣವಾಗುತ್ತದೆ. ವೈರಸ್‌ ಗಳಿಂದ ಮುಕ್ತವಾದ ಉತ್ತಮ ಉತ್ಪನ್ನಗಳಿಂದ ಗ್ರಾಹಕರು ಪ್ರಯೋಜನ ಪಡೆಯಲು ಇದು ಸಹಾಯವಾಗುತ್ತದೆ. ಹಣ್ಣುಗಳ ರುಚಿ ಮತ್ತು ಪೌಷ್ಟಿಕಾಂಶದ ಮೌಲ್ಯವನ್ನು ಹೆಚ್ಚಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT