ಪ್ರಣಯದ ದೃಶ್ಯ 
ದೇಶ

ತರಗತಿಯಲ್ಲೇ ಸರಸ: ಸಹಪಾಠಿಗಳ ಎದುರೆ ವಿದ್ಯಾರ್ಥಿಯನ್ನು ಬಿಗಿದಪ್ಪಿ ತುಟಿಗೆ ಚುಂಬಿಸಿದ ವಿದ್ಯಾರ್ಥಿನಿ, ವಿಡಿಯೋ ನೋಡಿ!

ಶಾಲಾ-ಕಾಲೇಜುಗಳನ್ನು ಶಿಕ್ಷಣದ ದೇವಾಲಯ ಎಂದು ಕರೆಯಲಾಗುತ್ತದೆ. ಇಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಜೀವನದ ಶಿಸ್ತನ್ನು ಕಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ವಿದ್ಯಾರ್ಥಿಗಳು ಎಲ್ಲೆ ದಾಟಿ ನಡೆದುಕೊಳ್ಳುತ್ತಿದ್ದು ಶಾಲೆಯ ಘನತೆಗೆ ಮಸಿ ಬಳಿಯುವ ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ.

ನೋಯ್ಡಾ: ಶಾಲಾ-ಕಾಲೇಜುಗಳನ್ನು ಶಿಕ್ಷಣದ ದೇವಾಲಯ ಎಂದು ಕರೆಯಲಾಗುತ್ತದೆ. ಇಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಜೀವನದ ಶಿಸ್ತನ್ನು ಕಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ವಿದ್ಯಾರ್ಥಿಗಳು ಎಲ್ಲೆ ದಾಟಿ ನಡೆದುಕೊಳ್ಳುತ್ತಿದ್ದು ಶಾಲೆಯ ಘನತೆಗೆ ಮಸಿ ಬಳಿಯುವ ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ. ಈ ಮಧ್ಯೆ, ಶಾಲೆಯ ಪ್ರತಿಷ್ಠೆಗೆ ಕಳಂಕ ತರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಅದು ಶಾಲೆಯ ತರಗತಿಯಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡಿದ್ದಾರೆ. ಆದರೆ ತರಗತಿಯ ಕೊನೆಯ ಬೆಂಚ್ ನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯು ಬಹಿರಂಗವಾಗಿ ಪ್ರಣಯದಲ್ಲಿ ತೊಡಗಿರುವುದು ಕಾಣಬಹುದು. ವಿದ್ಯಾರ್ಥಿನಿಯು ತನ್ನ ಪಕ್ಕದಲ್ಲಿ ಕುಳಿತ ವಿದ್ಯಾರ್ಥಿಯನ್ನು ತಬ್ಬಿಕೊಳ್ಳುತ್ತಿದ್ದು ನಂತರ ಆತನಿಗೆ ಚುಂಬಿಸಲು ಪ್ರಾರಂಭಿಸುತ್ತಾಳೆ. ಇದೇ ವೇಳೆ ಇನ್ನೊಂದು ಸಾಲಿನಲ್ಲಿ ಕುಳಿತ ವಿದ್ಯಾರ್ಥಿನಿ ಅವರ ಪ್ರಣಯದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಈ ವಿಡಿಯೋ ನೋಯ್ಡಾದ ಶಾಲೆಯೊಂದರದ್ದು ಎಂದು ಹೇಳಲಾಗುತ್ತಿದೆ.

ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳ ನಡುವಿನ ಪ್ರಣಯದ ವಿಡಿಯೋ ವೈರಲ್ ಆಗಿರುವುದು ಇದೇ ಮೊದಲಲ್ಲ. ಕೆಲ ದಿನಗಳ ಹಿಂದೆ ಕೂಡ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ನೋಯ್ಡಾ ಸೆಕ್ಟರ್ -125ರಲ್ಲಿರುವ ಖಾಸಗಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ, ಹುಡುಗ ಮತ್ತು ಹುಡುಗಿ ಪರಸ್ಪರ ಚುಂಬಿಸುತ್ತಿರುವುದು ಮತ್ತು ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದಿತ್ತು. ಇದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ವೈರಲ್ ಮಾಡಲಾಗಿತ್ತು.

ವೀಡಿಯೊ ವೈರಲ್ ಆದ ನಂತರ, ನೋಯ್ಡಾ ಪೊಲೀಸರು ವೀಡಿಯೊದಲ್ಲಿ ಕಂಡುಬರುವ ಯುವಕ ಮತ್ತು ಯುವತಿಯನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ. ವೈರಲ್ ವಿಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಎಲ್ಲಿಂದ ಬಂದಿದೆ ಎಂಬ ಬಗ್ಗೆ ಪೊಲೀಸರು ಇನ್ನೂ ಯಾವುದೇ ಅಧಿಕೃತ ದೃಢೀಕರಣವನ್ನು ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT