ಗನ್ ಸ್ವಚ್ಛಗೊಳಿಸುತ್ತಿರುವ ದೃಶ್ಯ TNIE
ದೇಶ

ಗನ್ ಸಂಸ್ಕೃತಿಯ ವೈಭವ: ಗ್ವಾಲಿಯರ್-ಚಂಬಲ್ ನಲ್ಲಿ ಬಂದೂಕು ಸ್ವಚ್ಛಗೊಳಿಸುವ ವಿಡಿಯೋ ವೈರಲ್; ಪೊಲೀಸರ ಭರ್ಜರಿ ಬೇಟೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಮೊರೆನಾ ಜಿಲ್ಲೆಯ ವೀಡಿಯೊವು ಮಹಿಳೆಯೊಬ್ಬರು ಹೊಸದಾಗಿ ನಿರ್ಮಿಸಲಾಗಿರುವ ನಾಡ ಪಿಸ್ತೂಲ್ ಕ್ಲಚ್ ಅನ್ನು ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು.

ಭೋಪಾಲ್: ಮಧ್ಯಪ್ರದೇಶದ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಇಬ್ಬರು ಮಹಿಳೆಯರು ಬಂದೂಕು ತೊಳೆಯುವ ವಿಡಿಯೋಗಳು ವೈರಲ್ ಆಗಿದ್ದು ಇದು ರಾಜ್ಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಗನ್ ಸಂಸ್ಕೃತಿಯ ಆಘಾತಕಾರಿ ವಿಷಯ ಮುನ್ನೆಲೆಗೆ ಬರುವಂತೆ ಮಾಡಿದೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ ಒಂದು ಮೊರೆನಾ ಜಿಲ್ಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಘಟಕವನ್ನು ಭೇದಿಸಲು ಪೊಲೀಸರಿಗೆ ನೆರವಾಯಿತು. ಇನ್ನೊಂದು ವೀಡಿಯೊವು ಪಕ್ಕದ ದತಿಯಾ ಜಿಲ್ಲೆಯ ಪೊಲೀಸರು ವೀಡಿಯೊದಲ್ಲಿನ ಮಹಿಳೆಯನ್ನು ಹುಡುಕಲು ಶೋಧ ಕಾರ್ಯಾಚರಣೆಗೆ ಮುಂದಾಗುವಂತೆ ಮಾಡಿದೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಮೊರೆನಾ ಜಿಲ್ಲೆಯ ವೀಡಿಯೊವು ಮಹಿಳೆಯೊಬ್ಬರು ಹೊಸದಾಗಿ ನಿರ್ಮಿಸಲಾಗಿರುವ ನಾಡ ಪಿಸ್ತೂಲ್ ಕ್ಲಚ್ ಅನ್ನು ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಅಲ್ಲದೆ ವ್ಯಕ್ತಿಯೊಬ್ಬ ಪಿಸ್ತೂಲ್ ಅನ್ನು ಹೇಗೆ ಸ್ವಚ್ಛಗೊಳಿಸಬೇಕು ಎಂಬ ನಿರ್ದೇಶನಗಳನ್ನು ನೀಡುವುದನ್ನು ಕೇಳಬಹುದು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಮಹುವಾ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ವೀಡಿಯೊವನ್ನು ಪರಿಶೀಲಿಸಿದ ನಂತರ, ಪೊಲೀಸ್ ತಂಡವು ಶುಕ್ರವಾರ ರಾತ್ರಿ ಗಣೇಶಪುರ ಪ್ರದೇಶದ ಮನೆಯೊಂದರ ಮೇಲೆ ದಾಳಿ ನಡೆಸಿತು. ಅಲ್ಲಿ ಕಳೆದ ಆರು ತಿಂಗಳಿನಿಂದ ಅಕ್ರಮ ಶಸ್ತ್ರಾಸ್ತ್ರ ಘಟಕವನ್ನು ನಡೆಸಲಾಗುತ್ತಿತ್ತು ಎಂದು ಮಹುವಾ ಪೊಲೀಸ್ ಠಾಣೆಯ ಉಸ್ತುವಾರಿ ಪವನ್ ಸಿಂಗ್ ತಿಳಿಸಿದ್ದಾರೆ.

ಮನೆಯಿಂದ ಮೂರು ನಾಡ ಪಿಸ್ತೂಲ್‌ಗಳು ಮತ್ತು ಅನೇಕ ಅರೆ ನಿರ್ಮಿತ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಅಕ್ರಮವಾಗಿ ಬಂದೂಕುಗಳನ್ನು ತಯಾರಿಸಲು ಬಳಸಿದ ಉಪಕರಣಗಳು ಮತ್ತು ಕಚ್ಚಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಮಹಿಳೆಯ ಪತಿ ಶಕ್ತಿ ಸಖ್ವಾರ್ ಮತ್ತು ಅವರ ತಂದೆ ಬಿಹಾರಿಲಾಲ್ ಸಖ್ವಾರ್ ಅವರನ್ನು ಬಂಧಿಸಿದ್ದು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ವಿಶೇಷವಾಗಿ ಮೊರೆನಾ ಜಿಲ್ಲೆ, ಒಂದು ಕಡೆ ರಾಜಸ್ಥಾನ ಮತ್ತು ಇನ್ನೊಂದು ಬದಿಯಲ್ಲಿ ಉತ್ತರಪ್ರದೇಶ ಗಡಿ ಹೊಂದಿದೆ. ಅದೇ ಗ್ವಾಲಿಯರ್-ಚಂಬಲ್ ಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯಲ್ಲಿ, ಮಹಿಳೆಯೊಬ್ಬರು ಬಂದೂಕು ಝಳಪಿಸುತ್ತಿರುವ ವೈರಲ್ ಚಿತ್ರಗಳು ಶನಿವಾರ ವೈರಲ್ ಆಗಿವೆ. ಮಹಿಳೆ ಕೈಯಲ್ಲಿ ಕಂಟ್ರಿಮೇಡ್ ಪಿಸ್ತೂಲ್ ನೊಂದಿಗೆ ನಗುತ್ತಿರುವ ಫೋಟೋಗಳು ದತಿಯಾ ಜಿಲ್ಲೆಯ ಜಿಗ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ್ದಾಗಿದೆ. ಫೋಟೋಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬಂದೂಕು ಹಿಡಿದ ಮಹಿಳೆ ಯಾರು ಎಂದು ಕಂಡುಹಿಡಿಯಲು ತನಿಖೆಗಳು ಪ್ರಾರಂಭವಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT