ಸಚಿವೆ ಅತಿಶಿ 
ದೇಶ

ಸ್ವಾತಂತ್ರ್ಯೋತ್ಸವ: ದೆಹಲಿ ಸಿಎಂ ಕೇಜ್ರಿವಾಲ್ ಬದಲಿಗೆ ಸಚಿವೆ ಅತಿಶಿಯಿಂದ ಧ್ವಜಾರೋಹಣ

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ನಂತರ ಗೋಪಾಲ್ ರೈ ಅವರು, ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಸಾಮಾನ್ಯ ಆಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ನವದೆಹಲಿ: ಸ್ವಾತಂತ್ರ್ಯೋತ್ಸವ ದಿನದಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬದಲಾಗಿ ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ ಎಂದು ದೆಹಲಿ ಸಚಿವ ಗೋಪಾಲ್ ರೈ ಅವರು ಸೋಮವಾರ ಹೇಳಿದ್ದಾರೆ. ಇದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಹೊಸ ಸಂಘರ್ಷಕ್ಕೆ ದಾರಿಮಾಡಿಕೊಡಬಹುದು.

ಇಂದು ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದ ನಂತರ ಗೋಪಾಲ್ ರೈ ಅವರು, ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಸಾಮಾನ್ಯ ಆಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಸಾಮಾನ್ಯ ಆಡಳಿತ ಸಚಿವರೂ ಆಗಿರುವ ರೈ, "ನಾನು ಇಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದೇನೆ. 2024 ರ ಆಗಸ್ಟ್ 15 ರಂದು ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಸಚಿವೆ ಅತಿಶಿ ಅವರು ಧ್ವಜಾರೋಹಣ ಮಾಡಬೇಕು ಎಂದು ಅವರು ಬಯಸಿದ್ದಾರೆ. ಅದಕ್ಕೆ ಅನುಗುಣವಾಗಿ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸೂಚಿಸಿದ್ದಾರೆ.

ಈ ಸಂಬಂಧ ಕಳೆದ ವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಬರೆದ ಪತ್ರದಲ್ಲಿ, ಕೇಜ್ರಿವಾಲ್ ಅವರು ತಮ್ಮ ಸ್ಥಾನದಲ್ಲಿ ದೆಹಲಿ ಸರ್ಕಾರದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡುತ್ತಾರೆ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಆದರೆ, ಮುಖ್ಯಮಂತ್ರಿಯಿಂದ ಯಾವುದೇ ಪತ್ರವನ್ನು ಸ್ವೀಕರಿಸಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಸ್ಪಷ್ಟನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT