ದೆಹಲಿ ಆಸ್ಪತ್ರೆಗಳಿಂದ ಅನಿರ್ದಿಷ್ಟಾವಧಿ ಮುಷ್ಕರ 
ದೇಶ

ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ, ಕೊಲೆ: ದೆಹಲಿ ಆಸ್ಪತ್ರೆಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್​​(FORDA) ಪ್ರಕಾರ, ಅನಿರ್ದಿಷ್ಟ ಮುಷ್ಕರದ ಸಮಯದಲ್ಲಿ, ಎಲ್ಲಾ ಹೊರರೋಗಿ ವಿಭಾಗಗಳು(ಒಪಿಡಿಗಳು), ಆಪರೇಷನ್ ಥಿಯೇಟರ್‌ಗಳು(ಒಟಿಗಳು) ಮತ್ತು ವಾರ್ಡ್ ಕರ್ತವ್ಯಗಳನ್ನು ಬಂದ್ ಮಾಡಲಾಗುವುದು.

ನವದೆಹಲಿ: ಇತ್ತೀಚೆಗೆ ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರರಕರಣ ಖಂಡಿಸಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಏಮ್ಸ್, ಆರ್‌ಎಂಎಲ್ ಆಸ್ಪತ್ರೆ ಮತ್ತು ಸಫ್ದರ್‌ಜಂಗ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳ ರೆಸಿಡೆಂಟ್ ವೈದ್ಯರು ಸೋಮವಾರ ತುರ್ತು ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್​​(ಫೋರ್ಡಾ) ಪ್ರಕಾರ, ಅನಿರ್ದಿಷ್ಟ ಮುಷ್ಕರದ ಸಮಯದಲ್ಲಿ, ಎಲ್ಲಾ ಹೊರರೋಗಿ ವಿಭಾಗಗಳು(ಒಪಿಡಿಗಳು), ಆಪರೇಷನ್ ಥಿಯೇಟರ್‌ಗಳು(ಒಟಿಗಳು) ಮತ್ತು ವಾರ್ಡ್ ಕರ್ತವ್ಯಗಳನ್ನು ಬಂದ್ ಮಾಡಲಾಗುವುದು. ಆದರೆ ತುರ್ತು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.

ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ AIIMSನ ರೆಸಿಡೆಂಟ್ ವೈದ್ಯರ ಸಂಘ(RDA) FORDA ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಭಾಗವಹಿಸುತ್ತಿದೆ. "ಸಂತ್ರಸ್ತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ನಾವು ಬಯಸುತ್ತೇವೆ. ಈ ದುಷ್ಕೃತ್ಯ ಅತ್ಯಂತ ಭಯಾನಕವಾಗಿದೆ. ಗುಣಪಡಿಸಲು ಮತ್ತು ಜೀವ ಉಳಿಸುವ ಸ್ಥಳದಲ್ಲಿ ಜೀವ ತೆಗೆಯಲಾಗಿದೆ" ಎಂದು AIIMS RDA ಪ್ರಧಾನ ಕಾರ್ಯದರ್ಶಿ ಡಾ ರಘುನಂದನ್ ದೀಕ್ಷಿತ್ ಅವರು ಹೇಳಿದ್ದಾರೆ.

ಕೋಲ್ಕತ್ತಾಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ 31 ವರ್ಷದ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಲಾಗಿದೆ.

ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.

ಅಪರಾಧದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಆ ವ್ಯಕ್ತಿ ಹೊರಗಿನ ವ್ಯಕ್ತಿಯಾಗಿದ್ದು, ಅವರು ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಉಚಿತ ಪ್ರವೇಶ ಹೊಂದಿದ್ದರು. "ಅವರ ಚಟುವಟಿಕೆಗಳು ಸಾಕಷ್ಟು ಅನುಮಾನಾಸ್ಪದವಾಗಿದೆ ಮತ್ತು ಅವರು ನೇರವಾಗಿ ಅಪರಾಧದಲ್ಲಿ ಭಾಗಿಯಾಗಿದ್ದಾರೆಂದು ತೋರುತ್ತದೆ" ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT