ಸಾಂದರ್ಭಿಕ ಚಿತ್ರ 
ದೇಶ

ಅಸ್ಸಾಂ: ದೇವಾಲಯ ಬಳಿ ಸೇರಿದವರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ, ಐವರು ಭಕ್ತರ ಸಾವು

ಪವಿತ್ರ ಶ್ರಾವಣ ಮಾಸದಲ್ಲಿ ಜಿಲ್ಲೆಯ ಮಹಾಮಾಯಾ ದೇವಸ್ಥಾನದ ಬಳಿ 'ಬೋಲ್ ಬೊಮ್ ಯಾತ್ರೆ'ಯಲ್ಲಿ ಭಾಗವಹಿಸಿದ್ದ ಭಕ್ತರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ.

ಗುವಾಹಟಿ: ದೇವಾಲಯವೊಂದರ ಬಳಿ ನೆರೆದಿದ್ದವರಿಗೆ ವೇಗವಾಗಿ ಬಂದ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಭಕ್ತರು ಸಾವನ್ನಪ್ಪಿರುವ ಘಟನೆ ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ರಕ್ ರಾಜಸ್ಥಾನದ ನೋಂದಣಿ ಸಂಖ್ಯೆ ಹೊಂದಿತ್ತು.

ಪೊಲೀಸರ ಪ್ರಕಾರ, ಪವಿತ್ರ ಶ್ರಾವಣ ಮಾಸದಲ್ಲಿ ಜಿಲ್ಲೆಯ ಮಹಾಮಾಯಾ ದೇವಸ್ಥಾನದ ಬಳಿ 'ಬೋಲ್ ಬೊಮ್ ಯಾತ್ರೆ'ಯಲ್ಲಿ ಭಾಗವಹಿಸಿದ್ದ ಭಕ್ತರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ‘ಜಲಭಿಷೇಕ’ ಮಾಡಲು ಭಕ್ತರು ದೇಗುಲದಲ್ಲಿ ನೆರೆದಿದ್ದರು ಎನ್ನಲಾಗಿದೆ. ದೇಗುಲದ ಮುಂಭಾಗದಲ್ಲಿದ್ದ ನಾಲ್ವರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಅವರೆಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೊಕ್ರಜಾರ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪುಷ್ಪರಾಜ್ ಸಿಂಗ್ ಹೇಳಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಎಂಬುದು ಗೊತ್ತಿದ್ದರೂ ಜಿಲ್ಲಾಡಳಿತ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ. ಈ ಮಧ್ಯೆ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT