ಜಗದಾಂಬಿಕಾ ಪಾಲ್ 
ದೇಶ

ವಕ್ಫ್ ಮಸೂದೆ: JPC ಸಮಿತಿಯ ಮುಖ್ಯಸ್ಥರಾಗಿ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ನೇಮಕ

ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಜೆಪಿಸಿಯಲ್ಲಿ ಇರಲಿದ್ದು ಮುಂದಿನ ಅಧಿವೇಶನದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುವ ಸಂಸತ್ತಿನ ಜಂಟಿ ಸಮಿತಿಯ (JPC) ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸಂಸದ ಜಗದಾಂಬಿಕಾ ಪಾಲ್ ಅವರನ್ನು ನೇಮಿಸಲಾಗಿದೆ.

31 ಸದಸ್ಯರ ಸಮಿತಿಯ ಮುಖ್ಯಸ್ಥರಾಗಿ ಜಗದಾಂಬಿಕಾ ಪಾಲ್ ಅವರನ್ನು ಸ್ಪೀಕರ್ ಓಂ ಬಿರ್ಲಾ ನೇಮಕ ಮಾಡಿದ್ದಾರೆ ಎಂದು ಲೋಕಸಭೆಯ ಅಧಿಸೂಚನೆ ತಿಳಿಸಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅದರ ನಿಬಂಧನೆಗಳ ವಿರುದ್ಧ ಪ್ರತಿಭಟನೆಯ ನಡುವೆ, ಸರ್ಕಾರವು ಮಸೂದೆಯನ್ನು ಎರಡೂ ಸದನಗಳ ಜಂಟಿ ಸಮಿತಿಗೆ ಕಳುಹಿಸಲು ನಿರ್ಧರಿಸಿದೆ.

ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಜೆಪಿಸಿಯಲ್ಲಿ ಇರಲಿದ್ದು ಮುಂದಿನ ಅಧಿವೇಶನದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ. 73 ವರ್ಷದ ಪಾಲ್ ಉತ್ತರ ಪ್ರದೇಶದಿಂದ ನಾಲ್ಕನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಎಲ್ಲಾ ಪಕ್ಷಗಳೊಂದಿಗೆ ಜಗದಾಂಬಿಕಾ ಪಾಲ್ ಉತ್ತ ಸೌಹಾರ್ದ ಸಂಬಂಧ ಹೊಂದಿದ್ದಾರೆ. ಸಂಸದೀಯ ವ್ಯವಹಾರಗಳ ಖಾತೆಯನ್ನು ಹೊಂದಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಮಿತಿಯ ಭಾಗವಾಗಲು ಸದಸ್ಯರನ್ನು ಹೆಸರಿಸುವ ಪ್ರಸ್ತಾವನೆಯನ್ನು ಲೋಕಸಭೆ ಮತ್ತು ರಾಜ್ಯಸಭೆ ಕಳೆದ ಶುಕ್ರವಾರ ಅಂಗೀಕರಿಸಿತು.

ಲೋಕಸಭೆಯಲ್ಲಿ ಸಮಿತಿಯ 12 ಸದಸ್ಯರು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (NDA) ಇದ್ದಾರೆ. ಇದರಲ್ಲಿ ಬಿಜೆಪಿಯ ಎಂಟು ಮತ್ತು ವಿರೋಧ ಪಕ್ಷದ ಒಂಬತ್ತು ಸದಸ್ಯರು ಸೇರಿದ್ದಾರೆ. ಮೇಲ್ಮನೆಯಲ್ಲಿ ಬಿಜೆಪಿಯಿಂದ ನಾಲ್ವರು, ಪ್ರತಿಪಕ್ಷದಿಂದ ನಾಲ್ವರು, ಮಸೂದೆಯನ್ನು ವಿರೋಧಿಸಿದ ವೈಎಸ್‌ಆರ್‌ಸಿಪಿಯಿಂದ ಒಬ್ಬರು ಮತ್ತು ಒಬ್ಬರು ನಾಮನಿರ್ದೇಶಿತ ಸದಸ್ಯದರು ಇರಲಿದ್ದಾರೆ.

ಕಳೆದ ಗುರುವಾರ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದು ತೀವ್ರ ಚರ್ಚೆಯ ನಂತರ ಅದನ್ನು ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಯಿತು. ಇದರಲ್ಲಿ ಪ್ರಸ್ತಾವಿತ ಕಾನೂನು ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ವಿರೋಧ ಪಕ್ಷಗಳು ಇದನ್ನು ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಸಂವಿಧಾನದ ಮೇಲಿನ ದಾಳಿ ಎಂದು ಕರೆದಿವೆ. ಮುಂದಿನ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಸಮಿತಿಯು ತನ್ನ ವರದಿಯನ್ನು ಲೋಕಸಭೆಯಲ್ಲಿ ಮಂಡಿಸುವಂತೆ ತಿಳಿಸಲಾಗಿದೆ ಎಂದು ರಿಜಿಜು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT