ದೆಹಲಿ ಸಚಿವ ಕೈಲಾಶ್ ಗಹ್ಲೋಟ್ 
ದೇಶ

ಸ್ವಾತಂತ್ರ್ಯೋತ್ಸವ: ಧ್ವಜಾರೋಹಣಕ್ಕೆ ಕೈಲಾಶ್ ಗಹ್ಲೋಟ್ ನಿಯೋಜಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

ಧ್ವಜಾರೋಹಣ ವಿಚಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ.

ನವದೆಹಲಿ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ವಿಚಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ.

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬದಲಾಗಿ ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ ಎಂದು ನಿನ್ನೆಯಷ್ಟೇ ದೆಹಲಿ ಸಚಿವ ಗೋಪಾಲ್ ರೈ ಅವರು ಹೇಳಿದ್ದರು.

ಇಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದೆಹಲಿ ಸರ್ಕಾರದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲು ದೆಹಲಿ ಗೃಹ ಸಚಿವ ಕೈಲಾಶ್ ಗಹ್ಲೋಟ್ ಅವರನ್ನು ನಿಯೋಜನೆ ಮಾಡಿದ್ದಾರೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

"ಛತ್ರಸಾಲ್ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲು ಸಚಿವ(ಗೃಹ), ಕೈಲಾಶ್ ಗಹ್ಲೋಟ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ನಿಯೋಜನೆ ಮಾಡಿದ್ದಾರೆ. ಅದಕ್ಕೆ ಅನುಗುಣವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಬಹುದು" ಎಂದು ಲೆಫ್ಟಿನೆಂಟ್ ಗವರ್ನರ್ ಕಾರ್ಯದರ್ಶಿ ಆಶಿಶ್ ಕುಂದ್ರಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇಂದು ಸಂಜೆ ರಾಜಭವನ ನೀಡಿದ ಸಂಕ್ಷಿಪ್ತ ಪ್ರಕಟಣೆಯಲ್ಲಿ, ಗಹ್ಲೋಟ್ ಅವರು ಧ್ವಜಾರೋಹಣ ಮಾಡಲಿದ್ದು ದೆಹಲಿ ಪೊಲೀಸರು ವಿಧ್ಯುಕ್ತವಾದ ಮಾರ್ಚ್-ಪಾಸ್ಟ್ ಪರೇಡ್‌ ಮಾಡುತ್ತಾರೆ. ಪೊಲೀಸರಿಗೆ ಸಂಬಂಧಿಸಿದ ವಿಷಯಗಳನ್ನು ಗೃಹ ಇಲಾಖೆಗೆ ನಿಯೋಜಿಸಲಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT