ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: ಗಡಿಯಲ್ಲಿ ಪಾಕ್ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದ BSF!

ಸೋಮವಾರ ರಾತ್ರಿ 8:30 ರ ಸುಮಾರಿಗೆ ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ಗಡಿ ದಾಟಿ ಗಡಿ ಬೇಲಿಯನ್ನು ಸಮೀಪಿಸುತ್ತಿರುವುದು ಕಂಡು ಬಂದಿತು.

ಜಲಂಧರ್: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿರುವಂತೆಯೇ ಪಂಜಾಬ್ ಗಡಿಯಿಂದ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಶಂಕಿತ ಪಾಕ್ ನುಸುಳುಕೋರನನ್ನು ಬಿಎಸ್ಎಫ್ ಗುಂಡಿಕ್ಕಿ ಕೊಂದಿದೆ.

ಸೋಮವಾರ ರಾತ್ರಿ 8:30 ರ ಸುಮಾರಿಗೆ ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ಗಡಿ ದಾಟಿ ಗಡಿ ಬೇಲಿಯನ್ನು ಸಮೀಪಿಸುತ್ತಿರುವುದು ಕಂಡು ಬಂದಿತು. ಆತ ಗಡಿ ದಾಟದಂತೆ ಬಿಎಸ್‌ಎಫ್ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೆ ಆತ ನಿಲ್ಲದೆ ಗಡಿ ಭದ್ರತಾ ಬೇಲಿಯತ್ತ ನಡೆದು ಬಂದಿದ್ದಾನೆ.

ಸಂಭಾವ್ಯ ಅಪಾಯವನ್ನು ಅರಿತು ಹಾಗೂ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಗಡಿಯಲ್ಲಿ ಹೈ ಅಲರ್ಟ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಸೈನಿಕರು ನುಸುಳುಕೋರನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿರುವುದಾಗಿ ಗಡಿ ಭದ್ರತಾ ಪಡೆಯ ಸೇನಾ ವಕ್ತಾರರು ತಿಳಿಸಿದ್ದಾರೆ.

ಗಡಿದಾಟಿ ದುಷ್ಕತ್ಯವೆಸಗುವ ಗಡಿಯಾಚೆಗಿನ ಉಗ್ರರ ಉದ್ದೇಶವನ್ನು ಬಿಎಸ್ಎಫ್ ಪಡೆಗಳು ಮತ್ತೊಮ್ಮೆ ವಿಫಲಗೊಳಿಸಿವೆ ಎಂದು ಅವರು ಹೇಳಿದ್ದಾರೆ. ಪಂಜಾಬ್‌ನ 553 ಕಿಲೋಮೀಟರ್ ಉದ್ದದ ಭಾರತ-ಪಾಕಿಸ್ತಾನ ಗಡಿ ಕಾಯುತ್ತಿರುವ ಬಿಎಸ್‌ಎಫ್, ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 10 ರಿಂದ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT