ವೀರ್ಯ ದಾನ (ಸಾಂಕೇತಿಕ ಚಿತ್ರ) online desk
ದೇಶ

ವಿಕಿ ಡೋನರ್ ಗೆ ಮಗುವಿನ ತಂದೆಯಾಗಿರಲು ಕಾನೂನು ಬದ್ಧ ಹಕ್ಕು ಇಲ್ಲ: ಹೈಕೋರ್ಟ್

42ರ ವಯಸ್ಸಿನ ಮಹಿಳೆಯೊಬ್ಬರಿಗೆ ಆಕೆಯ 5 ವರ್ಷದ ಅವಳಿ ಮಕ್ಕಳನ್ನು ಭೇಟಿ ಮಾಡುವುದಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಕೋರ್ಟ್ ಈ ಅಭಿಪ್ರಾಯ ಹೇಳಿದೆ.

ಬಾಂಬೆ: ವೀರ್ಯ ಅಥವಾ ಅಂಡಾಣು ದಾನಿಗೆ ಮಗುವಿನ ಜೈವಿಕ ಪೋಷಕರೆಂದು ಹಕ್ಕು ಪ್ರತಿಪಾದಿಸಲು ಸಾಧ್ಯವಿಲ್ಲ ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

42ರ ವಯಸ್ಸಿನ ಮಹಿಳೆಯೊಬ್ಬರಿಗೆ ಆಕೆಯ 5 ವರ್ಷದ ಅವಳಿ ಮಕ್ಕಳನ್ನು ಭೇಟಿ ಮಾಡುವುದಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಕೋರ್ಟ್ ಈ ಅಭಿಪ್ರಾಯ ಹೇಳಿದೆ.

ಆಕೆಯ ಮಕ್ಕಳು ತನ್ನ ಪತಿ ಹಾಗೂ ಮಕ್ಕಳ ಜನ್ಮಕ್ಕೆ ಅಂಡಾಣು ದಾನ ಮಾಡಿದ್ದ ತನ್ನ ಸಹೋದರಿಯ ಜೊತೆ ಇದ್ದಾರೆ. ಮಕ್ಕಳನ್ನು ಭೇಟಿ ಮಾಡಲು ಅನುಮತಿ ನೀಡಬೇಕೆಂದು ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಪಡೆದಿದ್ದ ಮಹಿಳೆ ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಮಹಿಳೆಯ ಪತಿ ಮಕ್ಕಳ ಜನ್ಮಕ್ಕೆ ತನ್ನ ಪತ್ನಿಯ ಸಹೋದರಿ ಕಾರಣವಾಗಿದ್ದು, ಆಕೆ ಅಂಡಾನು ದಾನ ಮಾಡಿ ಜೈವಿಕ ತಾಯಿಯಾಗಿದ್ದಾಳೆ, ಮಕ್ಕಳ ಮೇಲೆ ತನ್ನ ಪತ್ನಿಗೆ ಯಾವುದೇ ಹಕ್ಕು ಇಲ್ಲ ಎಂದು ವಾದಿಸಿದ್ದರು.

ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರಿದ್ದ ಏಕ ಪೀಠವು ಈ ವಾದವನ್ನು ಸ್ವೀಕರಿಸಲು ನಿರಾಕರಿಸಿತು, ಅರ್ಜಿದಾರರ ಕಿರಿಯ ಸಹೋದರಿ ಅಂಡಾಣು ದಾನಿಯಾಗಿದ್ದರೂ, ಅವಳಿಗಳ ಜೈವಿಕ ಪೋಷಕ ಎಂದು ಹೇಳಲು ಆಕೆಗೆ ಯಾವುದೇ ಕಾನೂನುಬದ್ಧ ಹಕ್ಕು ಇಲ್ಲ ಎಂದು ಕೋರ್ಟ್ ಹೇಳಿದೆ.

ಕಿರಿಯ ಸಹೋದರಿಯ ಪಾತ್ರವು ಅಂಡಾನು ದಾನಿ, ಬದಲಿಗೆ ಸ್ವಯಂಪ್ರೇರಿತ ದಾನಿ, ಮತ್ತು ಹೆಚ್ಚೆಂದರೆ, ಆಕೆ ಆನುವಂಶಿಕ ತಾಯಿಯಾಗಲು ಅರ್ಹತೆ ಪಡೆಯಬಹುದು ಮತ್ತು ಹೆಚ್ಚೇನೂ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT