ಸಲ್ಮಾನ್ ಖುರ್ಷಿದ್ TNIE
ದೇಶ

RSSಗೆ ಹಿನ್ನಡೆ: IICC ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಗೆಲುವು

ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಖುರ್ಷಿದ್ 721 ಮತಗಳನ್ನು ಪಡೆದಿದ್ದಾರೆ. ಇನ್ನು ಐಐಸಿಸಿಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಯತ್ನಿಸುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಆಘಾತವಾಗಿದೆ.

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಸಲ್ಮಾನ್ ಖುರ್ಷಿದ್ ಇಂಡಿಯಾ ಇಸ್ಲಾಮಿಕ್ ಕಲ್ಚರ್ ಸೆಂಟರ್ (IICC) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಖುರ್ಷಿದ್ 721 ಮತಗಳನ್ನು ಪಡೆದಿದ್ದಾರೆ. ಇನ್ನು ಐಐಸಿಸಿಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಯತ್ನಿಸುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಆಘಾತವಾಗಿದೆ. ಆರ್‌ಎಸ್‌ಎಸ್ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ರಾಷ್ಟ್ರೀಯ ಸಂಚಾಲಕ ಮತ್ತು ಆಂಕೊಲಾಜಿಸ್ಟ್ ಡಾ. ಮಜೀದ್ ಅಹ್ಮದ್ ತಾಳಿಕೋಟಿ ಅವರು ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಮಜೀದ್ ಅಹ್ಮದ್ ಗೆ ಐಐಸಿಸಿ ಮಾಜಿ ಅಧ್ಯಕ್ಷ ಸಿರಾಜುದ್ದೀನ್ ಖುರೇಷಿ ಬೆಂಬಲವಿತ್ತು. ಆದಾಗ್ಯೂ, ತಾಳಿಕೋಟಿ ಕೇವಲ 227 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದರು. ಇನ್ನು ಖುರ್ಷಿದ್ ಅವರ ಹತ್ತಿರದ ಪ್ರತಿಸ್ಪರ್ಧಿ ಉದ್ಯಮಿ ಆಸಿಫ್ ಹಬೀಬ್ 278 ಮತಗಳನ್ನು ಪಡೆದರು.

13 ಸದಸ್ಯರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಖುರ್ಷಿದ್ ಅವರ ಸಮಿತಿಯಿಂದ ಕನಿಷ್ಠ ಎಂಟು ಅಭ್ಯರ್ಥಿಗಳು ಗೆದ್ದಿದ್ದಾರೆ. ಐಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನನಗೆ ಅತೀವ ಗೌರವವಾಗಿದೆ. ನಿಮ್ಮ ವಿಶ್ವಾಸ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ ಧನ್ಯವಾದಗಳು. ಎಲ್ಲಾ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಒಟ್ಟಾಗಿ, ನಾವು ಐಐಸಿಸಿಯ ಮೌಲ್ಯಗಳ ಸುಧಾರಣೆ ಮತ್ತು ಸಂರಕ್ಷಣೆಗಾಗಿ ಕೆಲಸ ಮಾಡುತ್ತೇವೆ ಎಂದು ಖುರ್ಷಿದ್ ಗೆಲುವಿನ ನಂತರ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅದೇ ಸಮಯದಲ್ಲಿ, ಎಂಡಿ ಫುರ್ಕನ್ ಖುರೇಷಿ 362 ಮತಗಳಿಂದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT