ರಾಮ್ ನಾರಾಯಣ್ ಅಗರ್ವಾಲ್ TNIE
ದೇಶ

ವಿಶ್ವದ ಅತ್ಯಂತ ಶಕ್ತಿಶಾಲಿ 'ಅಗ್ನಿ' ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ನಿಧನ!

DRDO ತಯಾರಿಸಿದ ಅಗ್ನಿ ಕ್ಷಿಪಣಿಯನ್ನು ಭಾರತದ ಪರಮಾಣು ಸಾಮರ್ಥ್ಯದ ಬೆನ್ನೆಲುಬು ಎಂದು ಪರಿಗಣಿಸಲಾಗಿದೆ. ಇಲ್ಲಿಯವರೆಗೆ, ಅಗ್ನಿ ಕ್ಷಿಪಣಿಯ ಐದು ರೂಪಾಂತರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.

ನವದೆಹಲಿ: ಜಗತ್ತಿನ ಅತ್ಯಂತ ಶಕ್ತಿಶಾಲಿ ಕ್ಷಿಪಣಿಗಳಲ್ಲಿ ಒಂದಾದ ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಎಂದು ಕರೆಯಲ್ಪಡುವ ಖ್ಯಾತ DRDO ಕ್ಷಿಪಣಿ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ ಇಂದು ನಿಧನರಾಗಿದ್ದಾರೆ.

ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ ಅವರು 84ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು ಎಂದು DRDO ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯನ್ನು ಶಕ್ತಿಯುತವಾಗಿಸಿದ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ ಬಗ್ಗೆ ಕೆಲವು ವಿಶೇಷ ವಿಷಯಗಳನ್ನು ತಿಳಿಯೋಣ.

DRDO ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ ಭಾರತವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಬಹಳ ಪ್ರಮುಖ ಪಾತ್ರವನ್ನು ಹೊಂದಿದ್ದರು. ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮದಲ್ಲಿ ಅಗರ್ವಾಲ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಅಗ್ನಿ ಕ್ಷಿಪಣಿಗಳ ಮೊದಲ ಕಾರ್ಯಕ್ರಮ ನಿರ್ದೇಶಕರಾಗಿದ್ದರು. ರಾಮ್ ನಾರಾಯಣ ಅಗರ್ವಾಲ್ ಅವರನ್ನು ಅಗ್ನಿ ಪುರುಷ ಎಂದೂ ಕರೆಯುತ್ತಾರೆ ಎಂದು DRDO ಅಧಿಕಾರಿಯೊಬ್ಬರು ಹೇಳಿದ್ದಾರೆ.

DRDO ತಯಾರಿಸಿದ ಅಗ್ನಿ ಕ್ಷಿಪಣಿಯನ್ನು ಭಾರತದ ಪರಮಾಣು ಸಾಮರ್ಥ್ಯದ ಬೆನ್ನೆಲುಬು ಎಂದು ಪರಿಗಣಿಸಲಾಗಿದೆ. ಇಲ್ಲಿಯವರೆಗೆ, ಅಗ್ನಿ ಕ್ಷಿಪಣಿಯ ಐದು ರೂಪಾಂತರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಕ್ಷಿಪಣಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುವಂತೆ ಮಾಡುವುದು ಇದರ ಉದ್ದೇಶವಾಗಿತ್ತು. ಅಗ್ನಿ 1- 700-800 ಕಿ.ಮೀ, ಅಗ್ನಿ 2 - 2000 ಕಿ.ಮೀಗಿಂತ ಹೆಚ್ಚು, ಅಗ್ನಿ 3 - 2500 ಕಿ.ಮೀಗಿಂತ ಹೆಚ್ಚು, ಅಗ್ನಿ 4 - 3500 ಕಿ.ಮೀಗಿಂತ ಹೆಚ್ಚು ಮತ್ತು ಅಗ್ನಿ 5 - 5000 ಕಿ.ಮೀಗಿಂತ ಹೆಚ್ಚು ಕ್ರಮಿಸುವ ಸಾಮರ್ಥ್ಯ ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT