ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ  
ದೇಶ

78ನೇ ಸ್ವಾತಂತ್ರ್ಯ ದಿನಾಚರಣೆ : 'ಏಕರೂಪ ನಾಗರಿಕ ಸಂಹಿತೆ', 'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಪ್ರಧಾನಿ ಮೋದಿ ಕರೆ

'ಏಕರೂಪ ನಾಗರಿಕ ಸಂಹಿತೆ'ಯನ್ನು ಜಾರಿಗೆ ತರುವುದು ಮತ್ತು 'ತಾರತಮ್ಯದ ಕೋಮು ನಾಗರಿಕ ಸಂಹಿತೆ'ಯನ್ನು ತೊಡೆದುಹಾಕುವುದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಆವರಣದಿಂದ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ 'ಏಕರೂಪ ನಾಗರಿಕ ಸಂಹಿತೆ' ಜಾರಿಗೆ ಕರೆ ನೀಡಿದರು. ಇದು ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ಭಾಷಣ ಮತ್ತು ಅವರ ಸತತ 11 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿತ್ತು. ಇಂದಿನ ಭಾಷಣದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಎಂಬ ಪರಿಕಲ್ಪನೆಯನ್ನು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

'ಏಕರೂಪ ನಾಗರಿಕ ಸಂಹಿತೆ'ಯನ್ನು ಜಾರಿಗೆ ತರುವುದು ಮತ್ತು 'ತಾರತಮ್ಯದ ಕೋಮು ನಾಗರಿಕ ಸಂಹಿತೆ'ಯನ್ನು ತೊಡೆದುಹಾಕುವುದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು.

ಏಕರೂಪ ನಾಗರಿಕ ಸಂಹಿತೆ: ಏಕರೂಪ ನಾಗರಿಕ ಸಂಹಿತೆಯ ಕುರಿತು ಸುಪ್ರೀಂ ಕೋರ್ಟ್ ಆಗಾಗ್ಗೆ ಚರ್ಚಿಸಿ ನಿರ್ದೇಶನಗಳನ್ನು ನೀಡಿದೆ. ಪ್ರಸ್ತುತ ನಾಗರಿಕ ಸಂಹಿತೆ ತಾರತಮ್ಯ ಮತ್ತು ಕೋಮುವಾದ ಎಂದು ಅನೇಕ ಜನರು ಭಾವಿಸುತ್ತಾರೆ. ಸಂವಿಧಾನ ರಚನೆಕಾರರ ಆಶಯಗಳನ್ನು ಪ್ರತಿಬಿಂಬಿಸುವ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನವನ್ನು ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎರಡೂ ಬೆಂಬಲಿಸುತ್ತಿದೆ ಎಂದು ಅವರು ತಿಳಿಸಿದರು. ಆದ್ದರಿಂದ, ಈ ಉದ್ದೇಶವನ್ನು ಈಡೇರಿಸುವ ಮಹತ್ವವಿದೆ ಎಂದರು.

ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಚರ್ಚೆಗಳ ಅಗತ್ಯವನ್ನು ಒತ್ತಿ ಹೇಳಿದರು. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಪ್ರೋತ್ಸಾಹಿಸಿದರು. ಆಧುನಿಕ ಸಮಾಜಕ್ಕೆ ಸೂಕ್ತವಲ್ಲದ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುವ ಕಾನೂನುಗಳನ್ನು ತೆಗೆದುಹಾಕಬೇಕು ಎಂದರು. ಧಾರ್ಮಿಕ ತಾರತಮ್ಯವನ್ನು ಪರಿಹರಿಸಲು 'ಸೆಕ್ಯುಲರ್ ಸಿವಿಲ್ ಕೋಡ್' ಜಾರಿಗೆ ಈ ಸಮಯವಾಗಿದೆ ಎಂದರು.

ಒಂದು ರಾಷ್ಟ್ರ ಒಂದು ಚುನಾವಣೆ: 'ಒಂದು ರಾಷ್ಟ್ರ, ಒಂದು ಚುನಾವಣೆ'ಯ ಉಪಕ್ರಮವನ್ನು ಬೆಂಬಲಿಸಲು ಎಲ್ಲಾ ನಾಗರಿಕರು ಒಂದಾಗಬೇಕೆಂದು ಮೋದಿ ಕರೆ ನೀಡಿದರು. ಚುನಾವಣಾ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಆಡಳಿತದಲ್ಲಿ ಹೆಚ್ಚಿನ ದಕ್ಷತೆಯನ್ನು ತರಲು ಈ ನಿರ್ಣಯದ ಮಹತ್ವವನ್ನು ಅವರು ಒತ್ತಿ ಹೇಳಿದರು. ಆಗಾಗ್ಗೆ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡ್ಡಿಯಾಗುತ್ತವೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಗುರಿಯನ್ನು ಸಾಧಿಸಲು ಎಲ್ಲರೂ ಒಗ್ಗೂಡಬೇಕು ಎಂದು ಕರೆ ನೀಡಿದ ಮೋದಿ, ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ರಾಜಕೀಯ ಸ್ಥಿರತೆ ಮತ್ತು ಆಡಳಿತಾತ್ಮಕ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ರಾಷ್ಟ್ರವ್ಯಾಪಿ ಸಮಾನ ನಾಗರಿಕ ಸಂಹಿತೆ ಮತ್ತು 'ಒಂದು ರಾಷ್ಟ್ರ ಒಂದು ಚುನಾವಣೆ' ಎರಡೂ ಬಿಜೆಪಿಯ ಸತತ ಪ್ರಣಾಳಿಕೆಗಳ ಭಾಗವಾಗಿದೆ.

ಕೆಲವು ಬಿಜೆಪಿ ಆಡಳಿತದ ರಾಜ್ಯಗಳು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಶ್ರಮಿಸುತ್ತಿದ್ದರೂ, ಕೇಂದ್ರವು ರಾಷ್ಟ್ರೀಯವಾಗಿ ಅದರ ಅನುಷ್ಠಾನಕ್ಕೆ ಇದುವರೆಗೆ ಯಾವುದೇ ಶಾಸನಾತ್ಮಕ ಕ್ರಮವನ್ನು ಕೈಗೊಂಡಿಲ್ಲ. ಕಳೆದ ವರ್ಷವೇ ಕಾನೂನು ಆಯೋಗ ಅದಕ್ಕಾಗಿ ಸಮಾಲೋಚನೆ ಆರಂಭಿಸಿತ್ತು ಎಂದರು.

ಭಾರತದ 140 ಕೋಟಿ ನಾಗರಿಕರು ಒಗ್ಗಟ್ಟಿನ ಸಂಕಲ್ಪದೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಡೆದರೆ ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ದೇಶದ ಗುರಿಯನ್ನು ಸಾಧಿಸಬಹುದು ಎಂದು ಮೋದಿ ಪ್ರತಿಪಾದಿಸಿದರು.

ಮಧ್ಯಮ ವರ್ಗ ಮತ್ತು ಬಡವರ ಜೀವನವನ್ನು ಬದಲಾಯಿಸುವ ಉದ್ದೇಶದಿಂದ ದೊಡ್ಡ ಸುಧಾರಣೆಗಳನ್ನು ಹೊರತರುವ ಮೂಲಕ ಯಥಾಸ್ಥಿತಿಯೊಂದಿಗೆ ಬದುಕುವ ಮನಸ್ಥಿತಿಯಿಂದ ಹೊರಬರಲು ತಮ್ಮ ಸರ್ಕಾರ ಕೆಲಸ ಮಾಡಿದೆ ಎಂದು ಅವರು ಹೇಳಿದರು.

ಸುಧಾರಣೆಗಳ ಬದ್ಧತೆಯು ಬೆಳವಣಿಗೆಯ ನೀಲನಕ್ಷೆಯಾಗಿದೆ. ಇದು ಯಾವುದೇ ರಾಜಕೀಯ ಬಲವಂತದಿಂದ ಹೊರತಾಗಿಲ್ಲ. ಮೊದಲು ರಾಷ್ಟ್ರಕ್ಕೆ ಸಮರ್ಪಣೆಯಾಗಿದೆ ಎಂದರು. ಭಾರತಕ್ಕೆ ಇದು "ಸುವರ್ಣ ಯುಗ" ಎಂದು ಬಣ್ಣಿಸಿದ ಮೋದಿ ಈ ಅವಕಾಶವನ್ನು ಬಿಟ್ಟುಕೊಡಬೇಡಿ ಎಂದು ಜನರನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT