ಪ್ರತಿಭಟನೆ ವೇಳೆ ಪಿಸ್ತೂಲ್ ಪ್ರದರ್ಶಿಸಿದ ಗೋವಿಂದ್ ಗಜೇರಾ  
ದೇಶ

ಕೋಲ್ಕತ್ತಾ ಅತ್ಯಾಚಾರ-ಕೊಲೆ ಖಂಡಿಸಿ ಪ್ರತಿಭಟನೆ: ಪಿಸ್ತೂಲ್ ಪ್ರದರ್ಶಿಸಿದ ಗುಜರಾತ್ ವೈದ್ಯನ ವಿರುದ್ಧ ಕೇಸ್ ದಾಖಲು

ಅಹಮದಾಬಾದ್: ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ-ಹತ್ಯೆಯನ್ನು ಖಂಡಿಸಿ ಶುಕ್ರವಾರ ನಡೆದ ಪ್ರತಿಭಟನೆ ವೇಳೆ ಪಿಸ್ತೂಲ್ ಪ್ರದರ್ಶಿಸಿದ ಗೋವಿಂದ್ ಗಜೇರಾ ಎಂಬ ವೈದ್ಯನು ವಿರುದ್ಧ ಪೊಲೀಸರು ಶನಿವಾರ ಕೇಸ್ ದಾಖಲಿಸಿದ್ದಾರೆ.

ಪ್ರತಿಭಟನೆ ವೇಳೆ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವಾಗ ಗೋವಿಂದ್ ಗಜೇರಾ ಅವರು ತಮ್ಮ ಪರವಾನಗಿ ಪಡೆದ ಪಿಸ್ತೂಲ್ ಅನ್ನು ಪ್ರದರ್ಶಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಶುಕ್ರವಾರ ಅಮ್ರೇಲಿಯ ಶಾಂತಾಬಾ ವೈದ್ಯಕೀಯ ಕಾಲೇಜಿನ ಇಂಟರ್ನ್ ವೈದ್ಯರು ಅಹಮದಾಬಾದ್‌ನ ರಾಜಕಮಲ್ ಚೌಕ್‌ನಲ್ಲಿ ಕ್ಯಾಂಡಲ್‌ಲೈಟ್ ಮೆರವಣಿಗೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಡಾ. ಗಜೇರಾ ಅವರು ತಮ್ಮ ಪರವಾನಿಗೆ ಪಡೆದಿರುವ ರಿವಾಲ್ವರ್ ಅನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾರೆ ಮತ್ತು ನಮ್ಮ ರಕ್ಷಣೆಗಾಗಿ ಶಸ್ತ್ರಸಜ್ಜಿತರಾಗುವಂತೆ ವೈದ್ಯರಿಗೆ ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಅವರು ಪಿಸ್ತೂಲ್ ಹಿಡಿದಿರುವುದು ಕಂಡುಬಂದಿದ್ದು, ಡಾ.ಗಜೇರಾ ಅವರು ತಮ್ಮ ಭಾಷಣದಲ್ಲಿ, “ಪ್ರತಿಯೊಬ್ಬರೂ ತಮ್ಮ ಸುರಕ್ಷತೆಗಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿರಬೇಕು. ಮುಂದಿನ ಐದು ವರ್ಷಗಳಲ್ಲಿ, ಇಂತಹ ಘಟನೆಗಳು ಗಣನೀಯವಾಗಿ ಹೆಚ್ಚಾಗುತ್ತವೆ ಎಂದು ಹೇಳಿದ್ದಾರೆ.

ಪರವಾನಗಿ ಪಡೆದ ಪಿಸ್ತೂಲ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಡಾ. ಗಜೇರಾ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ(BNS)ಯ ಸೆಕ್ಷನ್ 353(1)(b) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಅಮ್ರೇಲಿ ಪೊಲೀಸ್ ಉಪಾಧೀಕ್ಷಕ(ಡಿವೈಎಸ್ಪಿ) ಚಿರಾಗ್ ದೇಸಾಯಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ