ಜೈರಾಮ್ ರಮೇಶ್ online desk
ದೇಶ

ಸೆಬಿ ಅಧ್ಯಕ್ಷರು ರಾಜೀನಾಮೆ ನೀಡಬೇಕು; ಅದಾನಿ ಹಗರಣದ ಬಗ್ಗೆ ಜೆಪಿಸಿ ತನಿಖೆಯ ಅಗತ್ಯ ಇದೆ: ಕಾಂಗ್ರೆಸ್

ಸೆಬಿ ಮುಖ್ಯಸ್ಥರು ಮತ್ತು ಉದ್ಯಮಿ ಗೌತಮ್ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಕಾಂಗ್ರೆಸ್, ಸೆಬಿ ಮುಖ್ಯಸ್ಥರಾಗಿ ಅವರ ಮುಂದುವರಿಕೆ "ಸಮರ್ಥನೀಯವಲ್ಲ" ಎಂದು ಹೇಳಿದೆ.

ನವದೆಹಲಿ: ಸೆಬಿ ಮುಖ್ಯಸ್ಥರು ಮತ್ತು ಉದ್ಯಮಿ ಗೌತಮ್ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಹೆಂಡೆನ್‌ಬರ್ಗ್‌ ವರದಿ ಆರೋಪಗಳು ದೇಶಾದ್ಯಂತ ಭಾರೀ ಗದ್ದಲ ಸೃಷ್ಟಿಸಿದ್ದು, ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರು ರಾಜೀನಾಮೆ ನೀಡಬೇಕು ಮತ್ತು ಅದಾನಿ ಸಂಸ್ಥೆಯ ಬಗ್ಗೆ ಕೇಳಿಬಂದಿರುವ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ(ಜೆಪಿಸಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ.

ಸೆಬಿ ಮುಖ್ಯಸ್ಥರು ಮತ್ತು ಉದ್ಯಮಿ ಗೌತಮ್ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಕಾಂಗ್ರೆಸ್, ಸೆಬಿ ಮುಖ್ಯಸ್ಥರಾಗಿ ಅವರ ಮುಂದುವರಿಕೆ "ಸಮರ್ಥನೀಯವಲ್ಲ" ಎಂದು ಹೇಳಿದೆ.

ಬುಚ್ ರಾಜೀನಾಮೆ ನೀಡಬೇಕು ಮತ್ತು ಅದಾನಿ "ಮೆಗಾ ಹಗರಣ" ಕುರಿತು ಸಂಪೂರ್ಣ ಜೆಪಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ದಿ ಮಾರ್ನಿಂಗ್ ಕಾಂಟೆಕ್ಸ್ಟ್‌ನ ಲೇಖನ ಉಲ್ಲೇಖಿಸಿ ಒತ್ತಾಯಿಸಿದ್ದಾರೆ.

ಮಾಧ್ಯಮ ವರದಿಯು ಈ ರೀತಿಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ: ಖಾಸಗಿ ಈಕ್ವಿಟಿ ಸಂಸ್ಥೆ ಬ್ಲ್ಯಾಕ್‌ಸ್ಟೋನ್ ಪಾಲನ್ನು ಹೊಂದಿರುವ ಕಂಪನಿಗಳನ್ನು ಒಳಗೊಂಡ ಎಲ್ಲಾ ವಿಷಯಗಳಿಂದ ಬುಚ್ ಹಿಂದೆ ಸರಿದಿದ್ದಾರೆಯೇ? ಹಾಗೆಯೇ ಎಷ್ಟು ಬ್ಲಾಕ್‌ಸ್ಟೋನ್ ಕಂಪನಿಗಳು ಆ ರಿಕ್ಯೂಸಲ್ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತವೆ? ಎಂದು ಜೈರಾಮ್ ರಮೇಶ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತೀಯ ಸೆಕ್ಯುರಿಟಿಸ್ ಹಾಗೂ ಶೇರು ವಿನಿಯಮ ಮಂಡಳಿ( ಸೆಬಿ) ಅಧ್ಯಕ್ಷರಿಗೆ ಸಂಬಂಧಿಸಿದ ಇತರ ಹಿತಾಸಕ್ತಿ ಸಂಘರ್ಷಗಳನ್ನು ದಿ ಮಾರ್ನಿಂಗ್ ಕಾಂಟೆಕ್ಸ್ಟ್ ಬೆಳಕಿಗೆ ತಂದಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT