ಅಮಿತ್ ಶಾ 
ದೇಶ

CAA ಅಡಿಯಲ್ಲಿ ಪಾಕ್‌ನ 188 ನಿರಾಶ್ರಿತರಿಗೆ ಭಾರತ ಪೌರತ್ವ ನೀಡಿದ ಅಮಿತ್ ಶಾ!

ಕಳೆದ ಹಲವು ವರ್ಷಗಳಿಂದ ಗುಜರಾತ್‌ನ ಮೋರ್ಬಿ, ಪಟಾನ್, ಸುರೇಂದ್ರನಗರ, ಮಹೇಶನ, ರಾಜ್‌ಕೋಟ್ ಮತ್ತು ವಡೋದರದಲ್ಲಿ ವಾಸಿಸುತ್ತಿರುವ ಹಿಂದೂ ವಲಸಿಗರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವದ ಪ್ರಮಾಣಪತ್ರಗಳನ್ನು ನೀಡಿದರು.

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ನೆರೆಯ ದೇಶಗಳಿಂದ ವಲಸೆ ಬಂದ ಹಿಂದೂಗಳಿಗೆ ಭಾರತೀಯ ಪೌರತ್ವ ಪತ್ರಗಳನ್ನು ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಅಹಮದಾಬಾದ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 188 ಜನರಿಗೆ ಭಾರತೀಯ ಪೌರತ್ವದ ಪ್ರಮಾಣಪತ್ರಗಳನ್ನು ನೀಡಿದರು.

ಕಳೆದ ಹಲವು ವರ್ಷಗಳಿಂದ ಗುಜರಾತ್‌ನ ಮೋರ್ಬಿ, ಪಟಾನ್, ಸುರೇಂದ್ರನಗರ, ಮಹೇಶನ, ರಾಜ್‌ಕೋಟ್ ಮತ್ತು ವಡೋದರದಲ್ಲಿ ವಾಸಿಸುತ್ತಿರುವ ಹಿಂದೂ ವಲಸಿಗರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವದ ಪ್ರಮಾಣಪತ್ರಗಳನ್ನು ನೀಡಿದರು. ಅಹಮದಾಬಾದ್‌ನ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಭಾಂಗಣದಲ್ಲಿ ಆಯೋಜಿಸಿದ್ದ ಈ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಗುಜರಾತ್ ಸರ್ಕಾರದ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಮತ್ತು ಶಾಸಕರು ಉಪಸ್ಥಿತರಿದ್ದರು.

ಹಿಂದೂ ವಲಸಿಗರಿಗೆ ಭಾರತೀಯ ಪೌರತ್ವದ ಪ್ರಮಾಣಪತ್ರವನ್ನು ನೀಡುವ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಇಲ್ಲಿಯವರೆಗೆ ನಿರಾಶ್ರಿತರು ಎಂದು ಕರೆಯಲ್ಪಡುವ 188 ಜನರನ್ನು ಭಾರತಮಾತೆಯ ಕುಟುಂಬಕ್ಕೆ ಸೇರಿಸಲಾಗುತ್ತಿದೆ ಎಂದು ಹೇಳಿದರು. ಇಂದು ನಾನು ಮತ್ತೊಮ್ಮೆ ಹೇಳುತ್ತೇನೆ, ಸಿಎಎ ಕೇವಲ ಪೌರತ್ವವನ್ನು ನೀಡುವ ಕಾರ್ಯಕ್ರಮವಲ್ಲ, ಆದರೆ ಲಕ್ಷಾಂತರ ನಿರಾಶ್ರಿತರಿಗೆ ನ್ಯಾಯ ಮತ್ತು ಹಕ್ಕುಗಳನ್ನು ನೀಡುವ ಕಾರ್ಯಕ್ರಮವಾಗಿದೆ ಎಂದರು.

ಸಿಎಎ ಪಾಕ್, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ವರದಾನ

ಅದೇ ಸಮಯದಲ್ಲಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿಯವರಿಗೆ ಸತತ ಮೂರನೇ ಬಾರಿಗೆ ದೇಶದ ನಾಯಕತ್ವವನ್ನು ಹಸ್ತಾಂತರಿಸಲಾಗಿದೆ. ದೇಶ ಸ್ವತಂತ್ರವಾದ ನಂತರ ಧರ್ಮದ ಹೆಸರಿನಲ್ಲಿ ಅನೇಕರು ನಮ್ಮಿಂದ ಬೇರ್ಪಡಬೇಕಾಯಿತು. ಆ ಸಮಯದಲ್ಲಿ, ಮಹಾತ್ಮಾ ಗಾಂಧಿ ಪ್ರತಿಯೊಬ್ಬರನ್ನು ಭಾರತದಲ್ಲಿ ನೆಲೆಸಲು ಸ್ವಾಗತಿಸಿದ್ದರು. ಆದರೆ ಪ್ರಧಾನಿ ಮೋದಿ ಮತ್ತು ಶಾ ಅವರ ಆಡಳಿತದಲ್ಲಿ ಅವರ ಮಾತುಗಳು ನಿಜವಾಗುತ್ತಿವೆ. ಇಂದು ದೇಶವು ಸಿಎಎಯಂತಹ ಕಾನೂನನ್ನು ಪಡೆದುಕೊಂಡಿದೆ. ಅದರ ಅಡಿಯಲ್ಲಿ 188 ಜನರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತಿದೆ. ಇವರೆಲ್ಲರನ್ನು ನೆರೆಯ ದೇಶದಲ್ಲಿ ನಿರಾಶ್ರಿತರು ಎಂದು ಕರೆಯಲಾಗುತ್ತಿತ್ತು, ಆದರೆ ಯಾರೂ ಇಲ್ಲದವರಿಗೆ ಮೋದಿಜೀ ಇದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಸಿಎಎ ವರದಾನವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT