ಹೇಮಂತ್ ಸೊರೆನ್ 
ದೇಶ

ಬಿಜೆಪಿಯಿಂದ ನಮ್ಮ ಶಾಸಕರ ಖರೀದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಜೆಎಂಎಂ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ದೆಹಲಿ ತಲುಪಿದ ಕೆಲವೇ ಗಂಟೆಗಳ ನಂತರ ಹೇಮಂತ್ ಸೊರೆನ್ ಅವರ ಹೇಳಿಕೆ ಹೊರಬಿದ್ದಿದೆ.

ಗೊಡ್ಡಾ: ಜೆಎಂಎಂ ನಾಯಕ ಚಂಪೈ ಸೊರೆನ್ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ಮಧ್ಯೆ, ಕೇಸರಿ ಪಕ್ಷವು ನಮ್ಮ ಶಾಸಕರನ್ನು ಖರೀದಿಸುತ್ತಿದೆ ಮತ್ತು ಸಮಾಜವನ್ನು ವಿಭಜಿಸುತ್ತದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾನುವಾರ ಆರೋಪಿಸಿದ್ದಾರೆ.

ಜೆಎಂಎಂ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ದೆಹಲಿ ತಲುಪಿದ ಕೆಲವೇ ಗಂಟೆಗಳ ನಂತರ ಹೇಮಂತ್ ಸೊರೆನ್ ಹೇಳಿಕೆ ಹೊರಬಿದ್ದಿದೆ.

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಸರ್ಕಾರಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹೇಮಂತ್ ಸೊರೆನ್, ಬಿಜೆಪಿಯು ಗುಜರಾತ್, ಅಸ್ಸಾಂ ಮತ್ತು ಮಹಾರಾಷ್ಟ್ರದಿಂದ ಜನರನ್ನು ಕರೆತಂದಿದ್ದು, "ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರನ್ನು ವಿಭಜಿಸಿ, ಪರಸ್ಪರ ಹೊಡೆದಾಡುವಂತೆ" ಮಾಡುತ್ತಿದೆ ಎಂದು ಆರೋಪಿಸಿದರು.

ಈ ಜನ, ಸಮಾಜ, ಕುಟುಂಬ ಮತ್ತು ಪಕ್ಷಗಳನ್ನು ಒಡೆಯುವ ಕೆಲಸ ಮಾಡುತ್ತಾರೆ. ಅವರು ಶಾಸಕರನ್ನು ಖರೀದಿಸುತ್ತಾರೆ. ಹಣವು ರಾಜಕಾರಣಿಗಳು ಇಲ್ಲಿಂದ ಅಲ್ಲಿಗೆ ಹೋಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಜೆಎಂಎಂ ತೊರೆದು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ನಡುವೆ ಅವರು ಇಂದು ದೆಹಲಿಗೆ ತೆರಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT