ಕೋಲ್ಕತಾ ಹತ್ಯಾಚಾರ ಪ್ರಕರಣ 
ದೇಶ

Kolkata Rape And Murder: ವೈದ್ಯರ ಪ್ರತಿಭಟನೆ ತೀವ್ರ, ಪ್ರತೀ 2 ಗಂಟೆಗೊಮ್ಮೆ ವರದಿ ನೀಡುವಂತೆ ರಾಜ್ಯಗಳಿಗೆ 'ಕೇಂದ್ರ' ಸೂಚನೆ!

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಈ ಆದೇಶವನ್ನು ಹೊರಡಿಸಿದ್ದು, ಪ್ರತಿ ಎರಡು ಗಂಟೆಗಳಿಗೊಮ್ಮೆ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ವರದಿಯನ್ನು ಸಲ್ಲಿಸುವಂತೆ ಕೇಳಿದೆ.

ನವದೆಹಲಿ: ಕೋಲ್ಕತ್ತಾ ಆಸ್ಪತ್ರೆಯಲ್ಲಿ ತನ್ನ ಕರ್ತವ್ಯದ ವೇಳೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ವಿಚಾರವಾಗಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತೀ 2 ಗಂಟೆಗೊಮ್ಮೆ ಆಯಾ ರಾಜ್ಯಗಳ ಸ್ಥಿತಿಗತಿ ವರದಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಈ ಆದೇಶವನ್ನು ಹೊರಡಿಸಿದ್ದು, ಪ್ರತಿ ಎರಡು ಗಂಟೆಗಳಿಗೊಮ್ಮೆ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ವರದಿಯನ್ನು ಸಲ್ಲಿಸುವಂತೆ ಕೇಳಿದೆ. ಈ ಅಧಿಸೂಚನೆಯ ಪ್ರಕಾರ, ಗೃಹ ಸಚಿವಾಲಯವು ದೇಶದ ಎಲ್ಲಾ ರಾಜ್ಯ ಪೊಲೀಸ್ ಪಡೆಗಳಿಗೆ ಪ್ರತಿ ಎರಡು ಗಂಟೆಗಳಿಗೊಮ್ಮೆ ಮೇಲ್, ಫ್ಯಾಕ್ಸ್ ಅಥವಾ ವಾಟ್ಸಾಪ್ ಮೂಲಕ ವರದಿಗಳನ್ನು ಕಳುಹಿಸಲು ನಿರ್ದೇಶಿಸಿದೆ.

"ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆದ ಮಹಿಳಾ ವೈದ್ಯರ ಹತ್ಯೆಯ ವಿರುದ್ಧ ನಿಮ್ಮ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ವರದಿಯನ್ನು ಮೇಲ್ವಿಚಾರಣೆ ಮಾಡಲು ಸಕ್ಷಮ ಪ್ರಾಧಿಕಾರವು ಬಯಸಿದೆ. ಈ ನಿಟ್ಟಿನಲ್ಲಿ ನಿರಂತರ ಎರಡು ಗಂಟೆಗಳ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ವರದಿಯನ್ನು ಇಂದು (16/08/24) ಸಂಜೆ 4 ಗಂಟೆಯಿಂದ ಫ್ಯಾಕ್ಸ್/ಇ-ಮೇಲ್/WhatsApp ಮೂಲಕ MHA ನಿಯಂತ್ರಣ ಕೊಠಡಿಗೆ ಕಳುಹಿಸಬಹುದು ಎಂದು MHA ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 16ರಿಂದಲೇ ವರದಿ

ಇನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಗಸ್ಟ್ 16 ರಿಂದಲೇ ತಮ್ಮ ರಾಜ್ಯಗಳಲ್ಲಿನ ಸ್ಥಿತಿಗತಿ ವರದಿಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಪ್ರಾರಂಭಿಸಿವೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, "ನಿರ್ಣಾಯಕ ಸಮಸ್ಯೆಗಳಿಗೆ ಸಂಬಂಧಿಸಿದ ವರದಿಗಳು ಸಮಯಕ್ಕೆ ತಲುಪುವುದನ್ನು ಇದು ಖಚಿತಪಡಿಸುತ್ತದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣದಲ್ಲಿ ಹಲವಾರು ಲೋಪದೋಷಗಳು ಗಮನಕ್ಕೆ ಬಂದಿವೆ. ಇಂತಹ ನಿರ್ಣಾಯಕ ಸಂದರ್ಭಗಳಲ್ಲಿ, ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕಾಗಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಭದ್ರತಾ ಪರಿಸ್ಥಿತಿಗಳ ಮೇಲೆ ನಿಗಾ ಇಡಲು ಈ ನಿರ್ಣಾಯಕ ಹೆಜ್ಜೆಯನ್ನು ತೆಗೆದುಕೊಳ್ಳಲಾಗಿದೆ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT