ಸಾಂದರ್ಭಿಕ ಚಿತ್ರ 
ದೇಶ

ಬಿಹಾರ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ನ್ಯಾಯಾಲಯದ ನಿರ್ದೇಶನದ ನಂತರ ಪ್ರಮುಖ ಆರೋಪಿಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಮತ್ತು ಬುಲ್ಡೋಜರ್‌ಗಳನ್ನು ಬಳಸಿ ಮನೆಯನ್ನು ನೆಲಸಮಗೊಳಿಸಲಾಗಿದೆ.

ಪಾಟ್ನಾ: 14 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರೈಯನ್ನು ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ, ಭಾನುವಾರ ಮುಜಾಫರ್‌ಪುರ ಜಿಲ್ಲೆಯ ಸರೈಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಬಳಸುತ್ತಿದ್ದ ಆತನ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚಿದ ನಂತರ ಶಂಕಿತ ಅಡಗುತಾಣದ ಮೇಲೆ ದಾಳಿ ನಡೆಸಿ, ಪ್ರಮುಖ ಆರೋಪಿಯನ್ನು ಬಂಧಿಸಿದೆ.

ಸಂಜಯ್ ರೈ ಮತ್ತು ಆತನ ಸಹಚರರ ವಿರುದ್ಧ ಎಫ್‌ಐಆರ್ ದಾಖಲಾದಾಗಿನಿಂದ ಆತ ತಲೆಮರೆಸಿಕೊಂಡಿದ್ದನು. ರೈಯನ್ನು ಈಗ ವಿಶೇಷ ಪೊಲೀಸ್ ತಂಡ ವಿಚಾರಣೆ ನಡೆಸುತ್ತಿದೆ ಮತ್ತು ಅವರ ಸಹಚರರಲ್ಲಿ ಒಬ್ಬನನ್ನು ಮೊದಲೇ ಬಂಧಿಸಲಾಗಿದೆ. ಇತರ ಸಹಚರರಿಗಾಗಿ ಶೋಧ ನಡೆಯುತ್ತಿದೆ ಎಂದು ಮುಜಾಫರ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕ ರಾಕೇಶ್ ಕುಮಾರ್ ಅವರು ಖಚಿತಪಡಿಸಿದ್ದಾರೆ.

ನ್ಯಾಯಾಲಯದ ನಿರ್ದೇಶನದ ನಂತರ ಪ್ರಮುಖ ಆರೋಪಿಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಮತ್ತು ಬುಲ್ಡೋಜರ್‌ಗಳನ್ನು ಬಳಸಿ ಮನೆಯನ್ನು ನೆಲಸಮಗೊಳಿಸಲಾಗಿದೆ.

ಎಫ್‌ಐಆರ್‌ನಲ್ಲಿ, ಮೂರು ಮಕ್ಕಳನ್ನು ಮದುವೆಯಾಗಿರುವ ರೈ, ತನ್ನ ಹದಿಹರೆಯದ ಮಗಳನ್ನು ಮದುವೆಯಾಗಲು ಬಯಸಿದ್ದ ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದಾರೆ.

ಅತ್ಯಾಚಾರ ಎಸಗಿ ಕೊಲೆ ಮಾಡುವ ಒಂದು ದಿನ ಮೊದಲು, ನನ್ನ ಮಗಳು ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಘೋರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. "ಆಗಸ್ಟ್ 11 ರಂದು ಸಂಭವಿಸಿದ ಅಮಾನವೀಯ ಘಟನೆಯಿಂದ ನಾವು ಭಯಭೀತರಾಗಿದ್ದೇವೆ" ಎಂದು ಸಂತ್ರಸ್ತೆಯ ತಾಯಿ ಹೇಳಿದರು.

ಆಗಸ್ಟ್ 11 ರಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ. ಮರುದಿನ ಬಾಲಕ ದೇಹ ಅವರ ಗ್ರಾಮದ ಬಳಿಯ ಕೊಳದಲ್ಲಿ ಪತ್ತೆಯಾಗಿತ್ತು. ಸಂತ್ರಸ್ತೆಯ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದ್ದು, ಆಕೆಯ ಕುತ್ತಿಗೆ, ತಲೆ ಮತ್ತು ತೋಳುಗಳ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ.

ಆದಾಗ್ಯೂ, ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಬಾಲಕಿಯ ಮುಖ, ಕುತ್ತಿಗೆ ಮತ್ತು ಎಡಗೈಯಲ್ಲಿ ಗಾಯದ ಗುರುತುಗಳಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT