ಸುಂದರರಾಜನ್ ಪದ್ಮನಾಭನ್ 
ದೇಶ

ಚೆನ್ನೈ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಸುಂದರರಾಜನ್ ಪದ್ಮನಾಭನ್ ನಿಧನ

ಸೆಪ್ಟೆಂಬರ್ 30, 2000 ರಿಂದ 31 ಡಿಸೆಂಬರ್ 31, 2002 ರವರೆಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಜನರಲ್ ಪದ್ಮನಾಭನ್ ಅವರು ಪತ್ನಿ, ಪುತ್ರಿ ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

ಚೆನ್ನೈ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಸುಂದರರಾಜನ್ ಪದ್ಮನಾಭನ್ ನಿಧನರಾಗಿದ್ದಾರೆ. ವಯೋಸಹಜ ಕಾರಣದಿಂದ ಬಳಲುತ್ತಿದ್ದ ಅವರು ಚೆನ್ನೈನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಆಪ್ತ ಮೂಲಗಳು ಸೋಮವಾರ ತಿಳಿಸಿವೆ.

ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ಸೆಪ್ಟೆಂಬರ್ 30, 2000 ರಿಂದ 31 ಡಿಸೆಂಬರ್ 31, 2002 ರವರೆಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಜನರಲ್ ಪದ್ಮನಾಭನ್ ಅವರು ಪತ್ನಿ, ಪುತ್ರಿ ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

ಪದ್ಮನಾಭನ್ ಅವರ ಮಕ್ಕಳು ಇಂದು ರಾತ್ರಿ ಅಮೆರಿಕದಿಂದ ಆಗಮಿಸಲಿದ್ದು, ನಾಳೆ ಸಂಜೆ ಅಂತ್ಯಕ್ರಿಯೆ ನಡೆಯಲಿದೆ. 15 ಕಾರ್ಪ್ಸ್ ಕಮಾಂಡರ್ ಆಗಿ ಅವರ ಸೇವೆಯನ್ನು ಗುರುತಿಸಿ ಅತಿ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಾಗಿತ್ತು.

ಡಿಸೆಂಬರ್ 5, 1940 ರಂದು ಕೇರಳದ ತಿರುವನಂತಪುರದಲ್ಲಿ ಜನಿಸಿದ ಜನರಲ್ ಪದ್ಮನಾಭನ್ ಅವರು ಡೆಹ್ರಡೂನ್ ನ ಪ್ರತಿಷ್ಠಿತ ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು ಮತ್ತು ಪುಣೆ ಖಡಕವಾಸ್ಲಾದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದರು.

ಅವರ ವೃತ್ತಿಜೀವನದಲ್ಲಿ ಹಲವಾರು ಪ್ರತಿಷ್ಠಿತ ಕಮಾಂಡ್, ಸಿಬ್ಬಂದಿ ಮತ್ತು ನಿರ್ದೇಶನಾತ್ಮಾಕ ಹುದ್ದೆಗಳ ಜೊತೆಗೆ ಹಲವಾರು ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು ಎಂದು ರಕ್ಷಣಾ ಸಚಿವಾಲಯ ಪ್ರಕಟಣೆ ತಿಳಿಸಿದೆ.

ಸುಂದರರಾಜನ್ ಪದ್ಮನಾಭನ್ ಅವರ ಪಾರ್ಥಿವ ಶರೀರಕ್ಕೆ ತಮಿಳುನಾಡು ಮುಖ್ಯಮಂತ್ರಿ ಆರ್ ಎನ್ ರವಿ ಅಂತಿಮ ನಮನ ಸಲ್ಲಿಸಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತೀವ್ರ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ