ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್ online desk
ದೇಶ

ಕೋಲ್ಕತ್ತಾ ಹತ್ಯಾಚಾರ: ತುರ್ತು ಸಭೆ ಕರೆದ ರಾಜ್ಯಪಾಲ ಬೋಸ್

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ವಿಭಾಗಗಳ ಪ್ರತಿನಿಧಿಗಳ ಸಭೆ ಇದಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಕೋಲ್ಕತ್ತ: ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂಬಂಧ ರಾಜ್ಯಪಾಲ ಆನಂದ್ ಬೋಸ್ ತುರ್ತು ಸಭೆ ಕರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ವಿಭಾಗಗಳ ಪ್ರತಿನಿಧಿಗಳ ಸಭೆ ಇದಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಬಂಗಾಳ ಗವರ್ನರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಮಾಜಿ ಕ್ರಿಕೆಟಿಗ ಹರ್ಭನ್ ಸಿಂಗ್ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜಭವನಕ್ಕೆ ಪತ್ರ ಬರೆದಿದ್ದಕ್ಕೆ ರಾಜ್ಯಪಾಲರು ತ್ವರಿತವಾಗಿ ಸ್ಪಂದಿಸಿದ್ದು, ರಾಜ್ಯಪಾಲರು ಈ ವಿಷಯದಲ್ಲಿ ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸಲು ಮತ್ತು ಈ ನಿಟ್ಟಿನಲ್ಲಿ ಅವರ ಅಭಿಪ್ರಾಯಗಳನ್ನು ಪರಿಶೀಲಿಸಲು ಬಂಗಾಳ ಸಮಾಜದ ಪ್ರತಿನಿಧಿಗಳ ತುರ್ತು ಸಭೆಯನ್ನು ಕರೆದಿದ್ದಾರೆ ಎಂದು ರಾಜಭವನ ತಿಳಿಸಿದೆ.

ಪ್ರಕರಣದ ಸಂಬಂಧ ತೆಗೆದುಕೊಂಡ ಕ್ರಮಗಳ ಕುರಿತು ಸಿಂಗ್ ಅವರನ್ನು ಉದ್ದೇಶಿಸಿ ಮಾತನಾಡುವುದಾಗಿ ರಾಜಭವನ ಹೇಳಿದೆ. ಘೋರ ಘಟನೆ ಮತ್ತು ಸರ್ಕಾರದ ಸ್ಪಷ್ಟ ನಿಷ್ಕ್ರಿಯತೆಯ ಬಗ್ಗೆ ತಮ್ಮ ಆಳವಾದ ಕಳವಳ ವ್ಯಕ್ತಪಡಿಸುತ್ತಿರುವ ಭಾರತದಾದ್ಯಂತ ನಾಗರಿಕ ಸಮಾಜದೊಂದಿಗೆ ತಮ್ಮ ಐಕಮತ್ಯವನ್ನು ರಾಜ್ಯಪಾಲರು ವ್ಯಕ್ತಪಡಿಸಿದರು.

ಭಾನುವಾರದಂದು, ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಸಂತ್ರಸ್ತೆಗೆ ನ್ಯಾಯದ ವಿಳಂಬದ ಬಗ್ಗೆ ಹರ್ಭಜನ್ ಸಿಂಗ್ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆ ಮತ್ತು ತ್ವರಿತ ಕ್ರಮದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT