ಸುಪ್ರೀಂ ಕೋರ್ಟ್  online desk
ದೇಶ

ತ್ರಿವಳಿ ತಲಾಖ್ ನಿಂದ ಮುಸ್ಲಿಂ ಮಹಿಳೆಯರ ಸ್ಥಿತಿ ಶೋಚನೀಯ: ಸುಪ್ರೀಂ ಕೋರ್ಟ್ ಗೆ ಕೇಂದ್ರದ ಮಾಹಿತಿ

ವಿವಾಹದ ದೃಷ್ಟಿಯಿಂದ ಸಾಮಾಜಿಕವಾಗಿಯೂ ತ್ರಿವಳಿ ತಲಾಖ್ ಮಾರಕ ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

ನವದೆಹಲಿ: ತ್ರಿವಳಿ ತಲಾಖ್ ನಿಂದ ಮುಸ್ಲಿಂ ಮಹಿಳೆಯರ ಸ್ಥಿತಿ ಶೋಚನೀಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ.

ವಿವಾಹದ ದೃಷ್ಟಿಯಿಂದ ಸಾಮಾಜಿಕವಾಗಿಯೂ ತ್ರಿವಳಿ ತಲಾಖ್ ಮಾರಕ ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

2017 ರಲ್ಲಿ ಕೆಲವು ಮುಸ್ಲಿಂ ಸಮುದಾಯಗಳಲ್ಲಿ ಮಾನ್ಯವಾಗಿದ್ದ ಈ ಪದ್ಧತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಆ ಸಮುದಾಯಗಳ ಸದಸ್ಯರಲ್ಲಿ "ಈ ಅಭ್ಯಾಸದಿಂದ ವಿಚ್ಛೇದನಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಸಾಕಷ್ಟು ಪ್ರತಿಬಂಧಕವಾಗಿ ಕೆಲಸ ಮಾಡಿಲ್ಲ" ಎಂದು ಸರ್ಕಾರ ಹೇಳಿದೆ.

"ತ್ರಿವಳಿ ತಲಾಖ್'ನ ಬಲಿಪಶುಗಳು ಪೊಲೀಸರನ್ನು ಸಂಪರ್ಕಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಮತ್ತು ಕಾನೂನಿನಲ್ಲಿ ದಂಡನಾತ್ಮಕ ನಿಬಂಧನೆಗಳ ಅನುಪಸ್ಥಿತಿಯಲ್ಲಿ ಪತಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗದ ಕಾರಣ ಪೊಲೀಸರು ಅಸಹಾಯಕರಾಗಿದ್ದರು. (ಇದನ್ನು) ತಡೆಯುವ ಸಲುವಾಗಿ ಕಟ್ಟುನಿಟ್ಟಾದ (ಕಾನೂನು) ನಿಬಂಧನೆಗಳು ತುರ್ತು ಅಗತ್ಯ", ಎಂದು ಸರ್ಕಾರ ಹೇಳಿದೆ.

ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಪದ್ಧತಿಯನ್ನು ಅಮಾನ್ಯಗೊಳಿಸಿರುವುದರಿಂದ ಅದನ್ನು ಕ್ರಿಮಿನಲ್ ಮಾಡುವ ಅಗತ್ಯವಿಲ್ಲ ಎಂದು ವಾದಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸರ್ಕಾರ ಈ ರೀತಿಯಾಗಿ ಪ್ರಮಾಣ ಪತ್ರ ಸಲ್ಲಿಸಿದೆ.

ಮೂಲ ಅಫಿಡವಿಟ್ ನ್ನು ಈ ತಿಂಗಳ ಆರಂಭದಲ್ಲಿ ಸಮಸ್ತ ಕೇರಳ ಜಮಿಯತುಲ್ ಉಲೇಮಾ ಸಲ್ಲಿಸಿದೆ, ಅದು ತನ್ನನ್ನು "ಪ್ರಖ್ಯಾತ ಸುನ್ನಿ ವಿದ್ವಾಂಸರ ಸಂಘ" ಎಂದು ವಿವರಿಸಿದ್ದು ಇತರ ಅಂಶಗಳ ಪೈಕಿ, ಅರ್ಜಿದಾರರು ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆ, 2019 ನ್ನು ಅಸಂವಿಧಾನಿಕ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT