ಕರುಣಾನಿಧಿ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ದೇಶ

ಬಿಜೆಪಿಯೊಂದಿಗೆ ಡಿಎಂಕೆ ರಹಸ್ಯ ಮೈತ್ರಿ: ಊಹಾಪೋಹ ಕುರಿತು ಸಿಎಂ ಸ್ಟಾಲಿನ್ ಹೇಳಿದ್ದು ಹೀಗೆ...

ಕರುಣಾನಿಧಿ ಅವರ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲು ರಕ್ಷಣಾ ಸಚಿವರನ್ನು ಆಹ್ವಾನಿಸದ ಮಾತ್ರಕ್ಕೆ ಬಿಜೆಪಿಯೊಂದಿಗೆ ಯಾವುದೇ ಸಂಬಂಧ ಹೊಂದುವ ಅಗತ್ಯವಿಲ್ಲ

ಚೆನ್ನೈ: ಡಿಎಂಕೆ ಸಂಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಂಡ ಬಳಿಕ ಬಿಜೆಪಿಯೊಂದಿಗೆ ರಹಸ್ಯ ಮೈತ್ರಿ ಕುರಿತ ಊಹಾಪೋಹಗಳು ಕೇಳಿಬರುತ್ತಿವೆ.

ಈ ಕುರಿತು ಸೋಮವಾರ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕರುಣಾನಿಧಿ ಅವರ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲು ರಕ್ಷಣಾ ಸಚಿವರನ್ನು ಆಹ್ವಾನಿಸದ ಮಾತ್ರಕ್ಕೆ ಬಿಜೆಪಿಯೊಂದಿಗೆ ಯಾವುದೇ ಸಂಬಂಧ ಹೊಂದುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಡಿಎಂಕೆ ತನ್ನ ತತ್ವ ಸಿದ್ಧಾಂತಗಳನ್ನು ಬದ್ಧವಾಗಿದ್ದು, ವಿರೋಧಿಸಬೇಕೆ ಅಥವಾ ಬೆಂಬಲ ನೀಡಬೇಕೆ" ಎಂಬ ಅದರ ನಿಲುವು ಪಕ್ಷದ ಸಿದ್ಧಾಂತವನ್ನು ಆಧರಿಸಿದೆ ಎಂದು ತಿಳಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜನಾಥ್ ಸಿಂಗ್, ಕರುಣಾನಿಧಿ ಅವರು ದೇಶದ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರು, ಸಮರ್ಥ ಆಡಳಿತಗಾರ, ಸಾಮಾಜಿಕ ನ್ಯಾಯದ ಪ್ರತಿಪಾದಕ ಮತ್ತು ಸಾಂಸ್ಕೃತಿಕ ದಿಗ್ಗಜ" ಎಂದು ಶ್ಲಾಘಿಸಿದ್ದರು.

ಇಂದು ಡಿಎಂಕೆ ಶಾಸಕ ಕೆ.ಪಿ ಶಂಕರ್ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಕೆ ಸ್ಟಾಲಿನ್, ರಕ್ಷಣಾ ಸಚಿವರನ್ನು ಆಹ್ವಾನಿಸಿದ ಮಾತ್ರಕ್ಕೆ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇವೆ ಎಂಬ ಊಹಾಪೋಹಗಳಿವೆ. ನಾವು ಬಿಜೆಪಿಯೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿಲ್ಲ. ಯಾವುದೇ ವಿಷಯದ ಬಗ್ಗೆ ಡಿಎಂಕೆ ಮತ್ತು ಅದರ ನಾಯಕ ಎಂ ಕರುಣಾನಿಧಿ ಅವರ ಬೆಂಬಲ ಅಥವಾ ವಿರೋಧ ಸೈದ್ಧಾಂತಿಕ ಆಧಾರಿತವಾಗಿರುತ್ತದೆ ಎಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಒಮ್ಮೆ ಹೇಳಿದ್ದರು ಎಂದು ಅವರು ನೆನಪಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT