ಕೋಲ್ಕತ್ತಾದಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಎಎಂಸಿ ಜೂನಿಯರ್ ವೈದ್ಯರು ಪ್ರತಿಭಟನೆ ನಡೆಸಿದರು. 
ದೇಶ

ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಹತ್ಯೆ ಪ್ರಕರಣ: ಲಂಚ, ಅಕ್ರಮ ಔಷಧ ದಂಧೆ ಕಾರಣ ಸಾಧ್ಯತೆ; CBI ಸುಳಿವು

ವಿವಿಧ ವೇದಿಕೆಗಳಲ್ಲಿ ಈ ದುಷ್ಕೃತ್ಯಗಳ ವಿರುದ್ಧ ಪ್ರತಿಭಟಿಸಿದ ಸಂತ್ರಸ್ತೆ, ಇದರಿಂದಾಗಿ ಅತ್ಯಾಚಾರ ಮತ್ತು ಕೊಲೆಗೆ ತುತ್ತಾಗಿರಬಹುದು ಎಂದು ಸಿಬಿಐ ಆಂತರಿಕ ಮೂಲಗಳು ಹೇಳುತ್ತವೆ. ಈ ಹಗರಣದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಕೈವಾಡ ಇರುವ ಬಗ್ಗೆಯೂ ತನಿಖೆ ಸುಳಿವು ನೀಡಿದೆ.

ಕೋಲ್ಕತ್ತಾ: ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9 ರಂದು 31 ವರ್ಷದ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಸ್ಥಳದಲ್ಲಿ ವರ್ಗಾವಣೆ ಹುದ್ದೆ ಮತ್ತು ಅಕ್ರಮ ಮೆಡಿಕಲ್ ಸಿಂಡಿಕೇಟ್ ನ್ನು ಒಳಗೊಂಡಿರುವ ಬೃಹತ್ ದಂಧೆಯನ್ನು ಸಿಬಿಐ ಬಹಿರಂಗಪಡಿಸಿದೆ.

ಈ ದಂಧೆ ಹಲವು ವರ್ಷಗಳಿಂದ ನಡೆಯುತ್ತಿದ್ದು, ಇತರ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಅದು ವ್ಯಾಪಿಸಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಅಕ್ರಮ ಜಾಲದ ಮೂಲಕ ರಾಜ್ಯ ಸರ್ಕಾರ ಖರೀದಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಗಳನ್ನು ಖಾಸಗಿ ಮೆಡಿಕಲ್ ಸ್ಟೋರ್‌ಗಳಿಗೆ ರವಾನಿಸಿರುವುದನ್ನು ಸಿಬಿಐ ಪತ್ತೆ ಹಚ್ಚಿದೆ.

ವಿವಿಧ ವೇದಿಕೆಗಳಲ್ಲಿ ಈ ದುಷ್ಕೃತ್ಯಗಳ ವಿರುದ್ಧ ಪ್ರತಿಭಟಿಸಿದ ಸಂತ್ರಸ್ತೆ, ಇದರಿಂದಾಗಿ ಅತ್ಯಾಚಾರ ಮತ್ತು ಕೊಲೆಗೆ ತುತ್ತಾಗಿರಬಹುದು ಎಂದು ಸಿಬಿಐ ಆಂತರಿಕ ಮೂಲಗಳು ಹೇಳುತ್ತವೆ. ಈ ಹಗರಣದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಕೈವಾಡ ಇರುವ ಬಗ್ಗೆಯೂ ತನಿಖೆ ಸುಳಿವು ನೀಡಿದೆ. ಹಗರಣದಲ್ಲಿ ಭಾಗಿಯಾಗಿರುವ ಇತರ ವೈದ್ಯರು ಮತ್ತು ವ್ಯಕ್ತಿಗಳನ್ನು ಸಿಬಿಐ ಸಕ್ರಿಯವಾಗಿ ಹುಡುಕುತ್ತಿದೆ.

ಹಣದ ಬದಲಾಗಿ ವೈದ್ಯರ ವರ್ಗಾವಣೆ ವ್ಯವಸ್ಥೆಯಲ್ಲಿ ವೈದ್ಯರು ಮತ್ತು ಆಡಳಿತದ ದಂಧೆ ತೊಡಗಿರುವುದು ನಮಗೆ ತಿಳಿದು ಬಂದಿದೆ ಎಂದು ಸಿಬಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುಮಾರು 20ರಿಂದ 30 ಲಕ್ಷ ರೂಪಾಯಿಗಳನ್ನು ಶೆಲ್ ಮಾಡಲು ಮತ್ತು ಆ ಕಾಲೇಜುಗಳಲ್ಲಿ ತಮ್ಮನ್ನು ನೇಮಿಸಿಕೊಳ್ಳಲು ಅದನ್ನು ದರೋಡೆಕೋರರಿಗೆ ಒದಗಿಸಬೇಕಾಗಿದೆ.

ಈ ಮಧ್ಯೆ ವೈದೆ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇನ್ನೂ ಯಾರನ್ನೂ ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆಗಳು ಎದ್ದಿವೆ.

ಸಿಬಿಐ ಆರ್‌ಜಿ ಕರ್‌ನ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಸತತ ನಾಲ್ಕನೇ ದಿನವೂ ವಿಚಾರಣೆ ನಡೆಸಿತು. ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಕುರಿತು ತನಿಖೆಗೆ ಮನವಿ ಮಾಡಿ ವೈದ್ಯರ ಪ್ರತಿಭಟನೆಯ ನಂತರ ಡಾ ಘೋಷ್ ಅವರನ್ನು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹುದ್ದೆಯಿಂದ ತೆಗೆದುಹಾಕಲಾಯಿತು.

ವೈದ್ಯರ ಸಾವಿನ ಸುದ್ದಿ ತಿಳಿದ ನಂತರ ಅವರು ಯಾರನ್ನು ಸಂಪರ್ಕಿಸಿದರು ಮತ್ತು ಸುಮಾರು ಮೂರು ಗಂಟೆಗಳ ಕಾಲ ಪೋಷಕರನ್ನು ಏಕೆ ಕಾಯುವಂತೆ ಮಾಡಿದರು ಎಂದು ಘೋಷ್ ಅವರನ್ನು ಕೇಳಲಾಯಿತು. ಘಟನೆಯ ನಂತರ ಆಸ್ಪತ್ರೆಯ ತುರ್ತು ಭವನದ ಸೆಮಿನಾರ್ ಹಾಲ್ ಬಳಿಯ ಕೊಠಡಿಗಳ ನವೀಕರಣಕ್ಕೆ ಆದೇಶಿಸಿದವರು ಯಾರು ಎಂದು ಸಹ ಮಾಜಿ ಪ್ರಾಂಶುಪಾಲರನ್ನು ಪ್ರಶ್ನಿಸಲಾಯಿತು.

ಕಳೆದ ಮೂರು ದಿನಗಳಲ್ಲಿ ಸಿಬಿಐ ಅಧಿಕಾರಿಗಳು ಘೋಷ್ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಅವರ ಮೊಬೈಲ್ ಫೋನ್ ಕರೆಗಳು ಮತ್ತು ಅವರ ವಾಟ್ಸಾಪ್ ಚಾಟ್ ಪಟ್ಟಿಯನ್ನು ಸಹ ಪರಿಶೀಲಿಸುತ್ತಿದ್ದರು.

ಪ್ರಕರಣದ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ನಡುವೆ, ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದ್ದು ಇಂದು ವಿಚಾರಣೆ ಆರಂಭಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT