ಬದ್ಲಾರ್ ಪುರ್ ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ  online desk
ದೇಶ

ಬದ್ಲಾಪುರ್: ಲೈಂಗಿಕ ದೌರ್ಜನ್ಯದ ಬಗ್ಗೆ FIR ದಾಖಲಿಸಲು ವಿಳಂಬ, ಆದರೆ 24 ಗಂಟೆಗಳಲ್ಲಿ ಪ್ರತಿಭಟನಾಕಾರರ ಬಂಧನ!

ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದವರ ಪೈಕಿ 70 ಮಂದಿಯನ್ನು ಬಂಧಿಸಲಾಗಿದ್ದು, 500 ಮಂದಿ ವಿರುದ್ಧ 5 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ.

ಮಹಾರಾಷ್ಟ್ರ: ಮಹಾರಾಷ್ಟ್ರದ ಬದ್ಲಾಪುರದಲ್ಲಿ ಕಿಂಡರ್ ಗಾರ್ಡನ್ ಮಕ್ಕಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವುದರಲ್ಲಿ ವಿಳಂಬವಾದರೂ, ಘಟನೆಯನ್ನು ಪ್ರತಿಭಟಿಸಿದವರ ಮೇಲೆ ತ್ವರಿತವಾಗಿ ಕ್ರಮ ಕೈಗೊಳ್ಳಲಾಗಿದೆ.

ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದವರ ಪೈಕಿ 70 ಮಂದಿಯನ್ನು ಬಂಧಿಸಲಾಗಿದ್ದು, 500 ಮಂದಿ ವಿರುದ್ಧ 5 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಪ್ರತಿಭಟನೆ ನಡೆದ 24 ಗಂಟೆಗಳ ಒಳಗಾಗಿ ಪ್ರತಿಭಟನಾಕಾರರ ವಿರುದ್ಧ ಈ ಕ್ರಮ ಜರುಗಿಸಲಾಗಿದೆ.

ಲೈಂಗಿಕ ದೌರ್ಜನ್ಯದ ವಿರುದ್ಧ ಎಫ್ಐಆರ್ ದಾಖಲಿಸುವುದಕ್ಕೆ ಪೊಲೀಸರು 12 ಗಂಟೆಗಳ ಕಾಲ ಸಮಯ ತೆಗೆದುಕೊಂಡಿದ್ದರು. ಆದರೆ ಪ್ರತಿಭಟನಾ ನಿರತರ ವಿರುದ್ಧ ತ್ವರಿತವಾಗಿ ಎಫ್ಐಆರ್ ಹಾಕಿ ಬಂಧಿಸಿರುವ ಪೊಲೀಸರ ಕ್ರಮಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಪೊಲೀಸರ ಅಸೂಕ್ಷ್ಮತೆಯ ವಿಷಯವಾಗಿ ವಿಪಕ್ಷಗಳು ಮಹಾಯುತಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.

ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಒಳಗೊಂಡಿರುವ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ನಾಯಕರು, ಬಾಲಕಿಯರ ಪೋಷಕರು ತಮ್ಮ ದೂರುಗಳನ್ನು ತೆಗೆದುಕೊಳ್ಳುವ ಮೊದಲು ಬದ್ಲಾಪುರ ಪೊಲೀಸ್ ಠಾಣೆಯಲ್ಲಿ 12 ಗಂಟೆಗಳ ಕಾಲ ಕಾಯುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಬಾಲಕಿಯರ ವೈದ್ಯಕೀಯ ಪರೀಕ್ಷೆಯು 10 ಗಂಟೆಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ, ಆಡಳಿತವು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದರೂ ಇಬ್ಬರು ಹೆಣ್ಣುಮಕ್ಕಳಲ್ಲಿ ಒಬ್ಬರ ತಾಯಿಯನ್ನು 10 ಗಂಟೆಗಳ ಕಾಲ ಪೊಲೀಸ್ ಠಾಣೆಯಲ್ಲಿ ಇರುವಂತೆ ಮಾಡಿರುವುದು ಆಕ್ರೋಶವನ್ನು ಹೆಚ್ಚಿಸಿದೆ.

ಕರ್ತವ್ಯಲೋಪ ಆರೋಪದ ಮೇಲೆ ಮಹಾರಾಷ್ಟ್ರ ಸರ್ಕಾರ 3 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಮತ್ತು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ತನಿಖೆಯನ್ನು ಹಸ್ತಾಂತರಿಸಿದೆ. ಶಾಲಾ ಆಡಳಿತ ಮಂಡಳಿ ಪ್ರಾಂಶುಪಾಲರು, ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನನ್ನು ಅಮಾನತುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT