ಸಿಎಂ ಏಕನಾಥ್ ಶಿಂಧೆ 
ದೇಶ

ಬದ್ಲಾಪುರ ಘಟನೆ ರಾಜಕೀಯ ಪ್ರೇರಿತ, ಪ್ರತಿಭಟನೆ ಮಾಡಿದವರಲ್ಲಿ ಹೆಚ್ಚಿನವರು ಹೊರಗಿನವರು: ಸಿಎಂ ಏಕನಾಥ್ ಶಿಂಧೆ

ಪ್ರತಿಭಟನೆಯಲ್ಲಿ ಸೇರಿದ್ದವರಲ್ಲಿ ಹೆಚ್ಚಿನವರು ಹೊರರಾಜ್ಯದವರಾಗಿದ್ದಾರೆ. ಇಲ್ಲಿ ರಾಜಕೀಯ ಮಾಡುತ್ತಿರುವವರಿಗೆ ನಾಚಿಕೆಯಾಗಬೇಕು, ಇದು ಪ್ರತಿಪಕ್ಷಗಳು ನಡೆಸುತ್ತಿರುವ ಕುತಂತ್ರ ಎಂದಿದ್ದಾರೆ.

ಮುಂಬೈ: ಥಾಣೆ ಜಿಲ್ಲೆಯ ಖಾಸಗಿ ಶಾಲೆಯ ನರ್ಸರಿ ತರಗತಿಯ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಬದ್ಲಾಪುರ್‌ನಲ್ಲಿ ನಿನ್ನೆ ಮಂಗಳವಾರ ನಡೆದ ತೀವ್ರ ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದ್ದು, ರಾಜ್ಯ ಸರ್ಕಾರವನ್ನು ಕೆಣಕುವ ಉದ್ದೇಶವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಸೇರಿದ್ದವರಲ್ಲಿ ಹೆಚ್ಚಿನವರು ಹೊರರಾಜ್ಯದವರಾಗಿದ್ದಾರೆ. ಇಲ್ಲಿ ರಾಜಕೀಯ ಮಾಡುತ್ತಿರುವವರಿಗೆ ನಾಚಿಕೆಯಾಗಬೇಕು, ಇದು ಪ್ರತಿಪಕ್ಷಗಳು ನಡೆಸುತ್ತಿರುವ ಕುತಂತ್ರ ಎಂದಿದ್ದಾರೆ.

ಪ್ರತಿಭಟನಾಕಾರರು ಸ್ಥಳೀಯ ನಿವಾಸಿಗಳಲ್ಲದ ಕಾರಣ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ಪ್ರತಿಭಟನೆಯಲ್ಲಿ ಭಾಗಿಯಾದ ಸ್ಥಳೀಯ ನಿವಾಸಿಗಳು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಸಚಿವ ಗಿರೀಶ್ ಮಹಾಜನ್ ಅವರು ಪ್ರತಿಭಟನಾಕಾರರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡರೂ ಮಣಿಯದಿರುವುದು ರಾಜಕೀಯ ದುರುದ್ದೇಶವಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದರರ್ಥ ಅವರು ಸರ್ಕಾರವನ್ನು ಕೆಣಕಲು ನೋಡುತ್ತಿದ್ದಾರೆ. ಕೆಲವು ಪ್ರತಿಭಟನಾಕಾರರು ಮಹಿಳೆಯರಿಗೆ ತಮ್ಮ ಸರ್ಕಾರದ ಪ್ರಮುಖ ಆರ್ಥಿಕ ನೆರವು ಯೋಜನೆಯಾದ 'ಲಡ್ಕಿ ಬಹಿನ್ ಯೋಜನೆ'ಯನ್ನು ಉಲ್ಲೇಖಿಸುವ ಫಲಕಗಳನ್ನು ಹಿಡಿದಿದ್ದರು. ತಮಗೆ ಮಾಸಿಕ 1,500 ರೂಪಾಯಿ ಬೇಡ, ಹೆಣ್ಣು ಮಕ್ಕಳಿಗೆ ರಕ್ಷಣೆ ಬೇಕು ಎಂದು ಫಲಕಗಳನ್ನು ಹಾಕಲಾಗಿತ್ತು.

ಯಾರಾದರೂ ಈ ರೀತಿ ಪ್ರತಿಭಟನೆ ಮಾಡುತ್ತಾರೆಯೇ, ವಿರೋಧ ಪಕ್ಷದವರು ಸರ್ಕಾರ ಹೆಣ್ಣುಮಕ್ಕಳಿಗೆ ನೀಡುತ್ತಿರುವ ಯೋಜನೆಯಿಂದ ಕುಗ್ಗಿಹೋಗಿದ್ದಾರೆ, ಇದರಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡಿದ್ದಾರೆ ಎಂದರು.

ಪ್ರತಿಭಟನಾಕಾರರು ರೈಲು ಮಾರ್ಗವನ್ನು ತಡೆದಿದ್ದರಿಂದ ಬದ್ಲಾಪುರದಿಂದ ಅಂಬರನಾಥ್ ನಡುವಿನ ರೈಲು ಸೇವೆಯನ್ನು 10 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ನಿನ್ನೆ ಪ್ರತಿಭಟನೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಕನಿಷ್ಠ 25 ಮಂದಿ ಪೊಲೀಸರು, ರೈಲ್ವೆ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪೊಲೀಸರು ಘಟನೆಗೆ ಸಂಬಂಧಪಟ್ಟಂತೆ ಕನಿಷ್ಠ 72 ಮಂದಿಯನ್ನು ಬಂಧಿಸಿದ್ದು ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT