ರೈಲ್ವೆ ನಿಲ್ದಾಣದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ 
ದೇಶ

ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಎಂವಿಎ ಕರೆ

ಮುಂಬರುವ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಬುಧವಾರ ಕರೆದಿದ್ದ ಸಭೆಯಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲು ಎಂವಿಎ ನಿರ್ಧರಿಸಿದೆ.

ಮುಂಬೈ: ಮಹಾರಾಷ್ಟ್ರದ ಬದ್ಲಾಪುರದಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಶಾಲಾ ಅಟೆಂಡರ್‌ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಖಂಡಿಸಿ ಭಾರಿ ಪ್ರತಿಭಟನೆ ನಡೆಯುತ್ತಿರುವುದರ ಮಧ್ಯ ಮಹಾ ವಿಕಾಸ್ ಅಘಾಡಿ(ಎಂವಿಎ) ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಬುಧವಾರ ಕರೆದಿದ್ದ ಸಭೆಯಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲು ಎಂವಿಎ ನಿರ್ಧರಿಸಿದೆ.

ಈ ಕುರಿತು ಮಾತನಾಡಿದ ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವತ್, "ನಾವು ಸೀಟು ಹಂಚಿಕೆ ಬಗ್ಗೆ ಚರ್ಚಿಸಲು ಇಲ್ಲಿಗೆ ಬಂದಿದ್ದೇವೆ. ಆದರೆ ನಾವು ಸೀಟು ಹಂಚಿಕೆ ಬಗ್ಗೆ ಚರ್ಚಿಸಲಿಲ್ಲ. ಬದ್ಲಾಪುರ ಘಟನೆಯ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದ್ದು, ಈ ಬಗ್ಗೆ ಚರ್ಚಿಸಿದೆವು ಎಂದರು.

ಮಹಾರಾಷ್ಟ್ರದ ಜನರು ಆಕ್ರೋಶಗೊಂಡಿದ್ದಾರೆ ಮತ್ತು ಪ್ರತಿಭಟಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬದ್ಲಾಪುರ ಘಟನೆಗೆ ಸಂಬಂಧಿಸಿದಂತೆ ಎಂವಿಎ ಆಗಸ್ಟ್ 24 ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಲಿದೆ ಎಂದರು.

"ನಿನ್ನೆ, ಬದ್ಲಾಪುರ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ 300 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ... ಇದು ಅಸಂವಿಧಾನಿಕ ಸರ್ಕಾರ... ಅಪರಾಧಿಗಳು ಹೆಚ್ಚಾಗುತ್ತಿದ್ದಾರೆ ಎಂದು ಎನ್‌ಸಿಪಿ-ಎಸ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಅವರು ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್ ಮುಖಂಡ ಬಾಳಾಸಾಹೇಬ್ ಥೋರಟ್ ಕೂಡ ಮಾತನಾಡಿದ್ದು, ಇಂದು ಸಭೆ ನಡೆಸಿ ಆಗಸ್ಟ್ 24ರಂದು ಬಂದ್‌ಗೆ ಕರೆ ನೀಡಿದ್ದೇವೆ. ಬದ್ಲಾಪುರ ಘಟನೆ ಅತ್ಯಂತ ಗಂಭೀರವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT