ನಿನ್ನೆ ರೈಲ್ ರೋಕೋ ಪ್ರತಿಭಟನೆ ಸಂದರ್ಭ  
ದೇಶ

ವ್ಯಾಪಕ ಪ್ರತಿಭಟನೆ, ಕಲ್ಲು ತೂರಾಟ, 'ರೈಲ್ ರೋಕೋ' ನಂತರ ಬದ್ಲಾಪುರ್ ರೈಲು ನಿಲ್ದಾಣ ಸಹಜ ಸ್ಥಿತಿಗೆ; ಸಂಚಾರ ಪುನಾರಂಭ

ಯಾವುದೇ ಅಹಿತಕರ ಘಟನೆ ಪುನರಾವರ್ತನೆ ಸಾಧ್ಯತೆಯಿರುವುದರಿಂದ ನಿನ್ನೆ ದುರ್ಘಟನೆ ನಡೆದ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ಇಂದು ತೀವ್ರ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.

ಬದ್ಲಾಪುರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ್ ನಲ್ಲಿ ತೀವ್ರ ಪ್ರತಿಭಟನೆ ನಡೆಸಿ ರೈಲು ನಿಲ್ದಾಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ರೈಲು ಸಂಚಾರ ತಡೆದು ಕಲ್ಲು ತೂರಾಟಕ್ಕೆ ಕಾರಣವಾಗಿದ್ದ ಖಾಸಗಿ ಶಾಲೆಯ ನರ್ಸರಿ ತರಗತಿಯ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದ ಮರುದಿನವಾದ ಇಂದು ಬುಧವಾರ ಪರಿಸ್ಥಿತಿ ಸಹಜತೆಗೆ ಮರಳುತ್ತಿದೆ.

ಯಾವುದೇ ಅಹಿತಕರ ಘಟನೆ ಪುನರಾವರ್ತನೆ ಸಾಧ್ಯತೆಯಿರುವುದರಿಂದ ನಿನ್ನೆ ದುರ್ಘಟನೆ ನಡೆದ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ಇಂದು ತೀವ್ರ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಶಾಲೆಯೊಂದರಲ್ಲಿ ಇಬ್ಬರು ಪುಟ್ಟ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಡೆದ ತೀವ್ರ 'ರೈಲ್ ರೋಕೋ' ಪ್ರತಿಭಟನೆಯ ಒಂದು ದಿನದ ನಂತರ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ಪರಿಸ್ಥಿತಿ ಇಂದು ಸಹಜ ಸ್ಥಿತಿಗೆ ಮರಳಿದೆ.

ವಾಶ್‌ರೂಮ್‌ನಲ್ಲಿ ಶಾಲಾ ಸ್ವೀಪರ್‌ನಿಂದ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಿನ್ನೆ ಮಂಗಳವಾರ ಸಾವಿರಾರು ಪ್ರತಿಭಟನಾಕಾರರು ಬದ್ಲಾಪುರ್ ನಿಲ್ದಾಣದಲ್ಲಿ ರೈಲು ಹಳಿಗಳನ್ನು ತಡೆದರು, ಇದು ಸ್ಥಳೀಯ ರೈಲು ಸೇವೆಗಳಿಗೆ ಭಾರಿ ಅಡ್ಡಿಯುಂಟಾಗಿತ್ತು ಮತ್ತು ಕೆಲವು ದೂರದ ರೈಲುಗಳ ಮಾರ್ಗವನ್ನು ಬೇರೆಡೆಗೆ ತಿರುಗಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್