ಚಂಪೈ ಸೊರೆನ್ TNIE
ದೇಶ

ರಾಜಕೀಯ ತೊರೆಯುವುದಿಲ್ಲ, ಹೊಸ ಪಕ್ಷ ಕಟ್ಟುತ್ತೇನೆ: ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್

"ಜೆಎಂಎಂಗಾಗಿ ನನ್ನ ಇಡೀ ಜೀವನ ಮುಡಿಪಾಗಿಟ್ಟಿದ್ದೆ. ಆದರೆ ಅವರಿಂದ ಅವಮಾನ ಅನುಭವಿಸಿದ" ನಂತರ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ದೃಢವಾಗಿರುವುದಾಗಿ ಮಾಜಿ ಸಿಎಂ ಹೇಳಿದ್ದಾರೆ.

ರಾಂಚಿ: ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ರಾಜಕೀಯ ತೊರೆಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ. ಅಲ್ಲದೆ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಆಯ್ಕೆ ಮುಕ್ತವಾಗಿದೆ ಎಂದು ತಿಳಿಸಿದ್ದಾರೆ.

"ಜೆಎಂಎಂಗಾಗಿ ನನ್ನ ಇಡೀ ಜೀವನ ಮುಡಿಪಾಗಿಟ್ಟಿದ್ದೆ. ಆದರೆ ಅವರಿಂದ ಅವಮಾನ ಅನುಭವಿಸಿದ" ನಂತರ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ದೃಢವಾಗಿರುವುದಾಗಿ ಮಾಜಿ ಸಿಎಂ ಹೇಳಿದ್ದಾರೆ.

ತಮ್ಮ ಪೂರ್ವಜರ ಗ್ರಾಮ ಜಿಲಿಂಗೋರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಹಿರಿಯ ನಾಯಕ ಸೊರೆನ್, "ಇದು ನನ್ನ ಜೀವನದ ಹೊಸ ಅಧ್ಯಾಯ, ನನ್ನ ಬೆಂಬಲಗರಿಂದ ನನಗೆ ಸಾಕಷ್ಟು ಪ್ರೀತಿ ಮತ್ತು ಬೆಂಬಲ ಸಿಕ್ಕಿರುವುದರಿಂದ ನಾನು ರಾಜಕೀಯವನ್ನು ತೊರೆಯುವುದಿಲ್ಲ ಎಂದರು.

ಒಂದು ನಾನು ರಾಜಕೀಯ ತೊರೆಯುವುದಿಲ್ಲ ಮತ್ತು ನಾನು ಹೊಸ ಪಕ್ಷ ಸ್ಥಾಪಿಸಬಹುದು ಎಂದು 67 ವರ್ಷದ ಬುಡಕಟ್ಟು ನಾಯಕ ಚಂಪೈ ಸೊರೆನ್ ಹೇಳಿದ್ದಾರೆ. ಚಂಪೈ ಸೊರೆನ್ ಅವರು 1990 ರ ದಶಕದಲ್ಲಿ ಪ್ರತ್ಯೇಕ ರಾಜ್ಯ ರಚಿಸುವ ಹೋರಾಟಕ್ಕೆ ನೀಡಿದ ಕೊಡುಗೆಗಾಗಿ 'ಜಾರ್ಖಂಡ್‌ನ ಹುಲಿ' ಎಂಬ ಖ್ಯಾತಿ ಗಳಿಸಿದ್ದಾರೆ.

"ಜೆಎಂಎಂನಿಂದ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಇದು ಜಾರ್ಖಂಡ್‌ನ ಭೂಮಿ. ನಾನು ನನ್ನ ವಿದ್ಯಾರ್ಥಿ ಜೀವನದಿಂದಲೂ ಹೋರಾಟ ಮಾಡಿದ್ದೇನೆ. ನಾನು ಪಕ್ಷದ ವರಿಷ್ಠ ಶಿಬು ಸೊರೆನ್ ನೇತೃತ್ವದಲ್ಲಿ ಪ್ರತ್ಯೇಕ ಜಾರ್ಖಂಡ್ ರಾಜ್ಯಕ್ಕಾಗಿ ನಡೆದ ಆಂದೋಲನದಲ್ಲಿ ಭಾಗವಹಿಸಿದ್ದೇನೆ" ಎಂದು ಚಂಪೈ ಸೊರೆನ್ ಹೇಳಿದ್ದಾರೆ.

2000ದಲ್ಲಿ ಜಾರ್ಖಂಡ್ ಅನ್ನು ಬಿಹಾರದಿಂದ ಪ್ರತ್ಯೇಕ ರಾಜ್ಯವಾಗಿ ಘೋಷಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT