ತುಷಾರ್ ಮೆಹ್ತಾ- ಕಪಿಲ್ ಸಿಬಲ್ online desk
ದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಹತ್ಯೆ ಕೇಸ್ ವಿಚಾರಣೆ: ನಗುತ್ತಿದ್ದ ಕಪಿಲ್ ಸಿಬಲ್ ಗೆ ಸಾಲಿಸಿಟರ್ ಜನರಲ್ ತರಾಟೆ!

ವಿಚಾರಣೆ ವೇಳೆ ನಗುತ್ತಾ ಕುಳಿತಿದ್ದ ಕಪಿಲ್ ಸಿಬಲ್ ವರ್ತನೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತಮ್ಮ ಸಹೋದ್ಯೋಗಿಯನ್ನು ವಾದ ಮಂಡನೆಯ ನಡುವೆಯೇ ತರಾಟೆಗೆ ತೆಗೆದುಕೊಂಡರು.

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಕೊಲೆ, ಅತ್ಯಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಇಂದು ಆ.22 ರಂದು ಕೋರ್ಟ್ ಕಲಾಪದ ಘನತೆ, ಗಾಂಭೀರ್ಯಕ್ಕೆ ತಕ್ಕಂತೆ ನಡೆದುಕೊಳ್ಳದ ಹಿರಿಯ ಅಡ್ವೊಕೇಟ್, ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ವಕೀಲ ಕಪಿಲ್ ಸಿಬಲ್, ಸೂಕ್ಷ್ಮತೆಯನ್ನು ಮರೆತು ವರ್ತಿಸಿರುವುದು ದೇಶಾದ್ಯಂತ ವ್ಯಾಪಕ ಟೀಕೆಗೆ ಒಳಗಾಗಿದೆ.

ವಿಚಾರಣೆ ವೇಳೆ ನಗುತ್ತಾ ಕುಳಿತಿದ್ದ ಕಪಿಲ್ ಸಿಬಲ್ ವರ್ತನೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತಮ್ಮ ಸಹೋದ್ಯೋಗಿಯನ್ನು ವಾದ ಮಂಡನೆಯ ನಡುವೆಯೇ ತರಾಟೆಗೆ ತೆಗೆದುಕೊಂಡರು. "ದಯವಿಟ್ಟು ನಗಬೇಡಿ, ಓರ್ವ ಹೆಣ್ಣುಮಗಳನ್ನು ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಲಾಗಿದೆ" ಎಂದು ತುಷಾರ್ ಮೆಹ್ತಾ ಕಪಿಲ್ ಸಿಬಲ್ ಗೆ ಬುದ್ಧಿ ಹೇಳಿದರು.

ಸಿಜೆಐ ಮತ್ತು ಎಸ್‌ಜಿ ಅವರು 'ಅಸ್ವಾಭಾವಿಕ ಮರಣ (ಯುಡಿ) ವರದಿಯನ್ನು ದಾಖಲಿಸುವಲ್ಲಿ ಮತ್ತು ಎಫ್‌ಐಆರ್ ದಾಖಲಿಸುವಲ್ಲಿ ಕಾಲಗಣನೆ ಮತ್ತು ವಿಳಂಬದ ಬಗ್ಗೆ ಪ್ರಶ್ನಿಸಿದಾಗ ಕಪಿಲ್ ಸಿಬಲ್ ನಗುತ್ತಿದ್ದರು. ತುಷಾರ್ ಮೆಹ್ತಾಗೆ ಪ್ರತಿಕ್ರಿಯೆ ನೀಡಿದ ಕಪಿಲ್ ಸಿಬಲ್, ಇದು ಅತ್ಯಂತ ಬರ್ಬರ, ಅನಾಗರಿಕ ಕೃತ್ಯ ಎಂಬುದು ನಮಗೆಲ್ಲರಿಗೂ ಗೊತ್ತು, ಆದರೆ ನೀವು ಈಗ ಕೆಸರೆರೆಚಾಟ ಮಾಡುತ್ತಿದ್ದೀರ ಎಂದು ಸಿಬಲ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮರಣೋತ್ತರ ಕ್ರಿಯೆಗಳ ಕಾಲಾನುಕ್ರಮದ ಬಗ್ಗೆ ಪ್ರಶ್ನೆ

"ಪೊಲೀಸ್ ಠಾಣೆಯಿಂದ ಹಿಂತಿರುಗಿದ ನಂತರ, ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ. ಈ ಯುಡಿ ಪ್ರಕರಣವನ್ನು ರಾತ್ರಿ 11:30 ಕ್ಕೆ ಮತ್ತು ರಾತ್ರಿ 11.45 ಕ್ಕೆ, ಎಫ್‌ಐಆರ್ ದಾಖಲಿಸಲಾಗಿದೆ. ಅದು ಕಾಲಾನುಕ್ರಮವಾಗಿದೆ" ಎಂದು ಎಸ್‌ಜಿ ತುಷಾರ್ ಮೆಹ್ತಾ ಹೇಳಿದರು.

ಪೊಲೀಸರು ನಡೆಸಿದ ಕಾನೂನು ವಿಧಿವಿಧಾನಗಳ ಅನುಕ್ರಮ ಮತ್ತು ಸಮಯವನ್ನು ಪ್ರಶ್ನಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠ, ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸುವ ಮೊದಲು ಆಗಸ್ಟ್ 9 ರಂದು ಸಂಜೆ 6.10 ರಿಂದ 7.10 ರ ನಡುವೆ ಮರಣೋತ್ತರ ಪರೀಕ್ಷೆ ನಡೆಸಿರುವುದು ತುಂಬಾ ಆಶ್ಚರ್ಯಕರವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT