ಸಾಂದರ್ಭಿಕ ಚಿತ್ರ 
ದೇಶ

ಸುಪ್ರೀಂ ಕೋರ್ಟ್ ಮನವಿಗೆ ಸ್ಪಂದಿಸಿ AIIMS, RML, IGH ವೈದ್ಯರ ಮುಷ್ಕರ ವಾಪಸ್!

ಪ್ರತಿಭಟನಾನಿರತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ವೈದ್ಯರ ಮಂಡಳಿ ಶ್ಲಾಘಿಸಿದೆ.

ನವದೆಹಲಿ: ಕೋಲ್ಕತ್ತದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಮನವಿ ಮಾಡಿದ ನಂತರ ನವದೆಹಲಿಯ ಏಮ್ಸ್ ನ ಸ್ಥಾನಿಕ ಡಾಕ್ಟರ್ ಅಸೋಸಿಯೇಷನ್ ನಡೆಸುತ್ತಿದ್ದ 11 ದಿನಗಳ ಮುಷ್ಕರವನ್ನು ಹಿಂತೆಗೆದುಕೊಂಡಿದೆ.

ಸುಪ್ರೀಂ ಕೋರ್ಟ್‌ನ ಮನವಿ ಮತ್ತು ನಿರ್ದೇಶನಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವೈದ್ಯರ ಅಸೋಸಿಯೇಷನ್ ಹೇಳಿಕೆಯಲ್ಲಿ ತಿಳಿಸಿದೆ. ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಜನಿಕ ಸೇವೆ ಹಿನ್ನೆಲೆಯಲ್ಲಿ AIIMSನ ವೈದ್ಯರ ಸಂಘ 11 ದಿನಗಳ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಅಲ್ಲದೆ RML, IGH ವೈದ್ಯರು ಸಹ ತಮ್ಮ ಮುಷ್ಕರ ಹಿಂಪಡೆದಿದ್ದಾರೆ.

ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಘಟನೆ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಮತ್ತು ದೇಶಾದ್ಯಂತ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಭದ್ರತೆಯ ಸಮಸ್ಯೆಯನ್ನು ಪರಿಹರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಪ್ರಾಮಾಣಿಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇವೆ ಎಂದು ಅಸೋಸಿಯೇಷನ್ ತಿಳಿಸಿದೆ.

ಪ್ರತಿಭಟನಾಕಾರರು ಕಳವಳಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ನಿಂದ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಲು ಸಂಘವು ಒಪ್ಪಿಕೊಂಡಿದೆ. ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳನ್ನು ಬಲವಾಗಿ ಒತ್ತಾಯಿಸುವುದಾಗಿ ಹೇಳಿದೆ. ಪ್ರತಿಭಟನಾನಿರತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ವೈದ್ಯರ ಮಂಡಳಿ ಶ್ಲಾಘಿಸಿದೆ.

ಸುರಕ್ಷತಾ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವವರೆಗೆ ಕೆಲಸದ ಸಮಯದ ನಂತರ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಸಂಘ ತಿಳಿಸಿದೆ. "ರೋಗಿಗಳ ಆರೈಕೆ" ನಮ್ಮ ಅತ್ಯಂತ ಆದ್ಯತೆಯಾಗಿದ್ದು, ಅದನ್ನು ಎತ್ತಿಹಿಡಿಯಲು ಸಮರ್ಪಿತರಾಗಿದ್ದೇವೆ. ನಮ್ಮ ಧ್ಯೇಯದಲ್ಲಿ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ. ನ್ಯಾಯ ಸಿಗುವವರೆಗೆ ಮತ್ತು ಸುರಕ್ಷತಾ ಮಾರ್ಗಸೂಚಿಗಳ ಅನುಷ್ಠಾನದವರೆಗೆ ನಾವು ಸಾಂಕೇತಿಕ ಪ್ರತಿಭಟನೆಯ ಮೂಲಕ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT