ರೈತರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಪೊಲೀಸರು  
ದೇಶ

ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚನೆ: ಸುಪ್ರೀಂ ಕೋರ್ಟ್

ಫೆಬ್ರವರಿ 13 ರಿಂದ ಪ್ರತಿಭಟನಾ ನಿರತ ರೈತರು ಅಂಬಾಲ ಬಳಿಯ ಶಂಭು ಗಡಿಯಲ್ಲಿ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ಒಂದು ವಾರದೊಳಗೆ ತೆಗೆದುಹಾಕುವಂತೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಹರಿಯಾಣ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ನವದೆಹಲಿ: ರೈತರ ಕುಂದುಕೊರತೆಗಳನ್ನು ಸಾರ್ವಕಾಲಿಕವಾಗಿ ಸೌಹಾರ್ದಯುತವಾಗಿ ಪರಿಹರಿಸಲು ಬಹು ಸದಸ್ಯರ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ರೈತರ ಸಮಸ್ಯೆಗಳ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2 ಕ್ಕೆ ಮುಂದೂಡಿದ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು, ರೈತರಿಗೆ ಸಂಬಂಧಿಸಿದ ತಾತ್ಕಾಲಿಕ ಸಮಸ್ಯೆಗಳನ್ನು ಸಮಿತಿಗೆ ನೀಡುವಂತೆ ಪಂಜಾಬ್ ಮತ್ತು ಹರಿಯಾಣ ಸರ್ಕಾರಕ್ಕೆ ಸೂಚಿಸಿದೆ.

ಸುಪ್ರೀಂ ಕೋರ್ಟ್‌ನ ಆಗಸ್ಟ್ 12 ರ ಆದೇಶವನ್ನು ಅನುಸರಿಸಿ, ಪ್ರತಿಭಟನಾನಿರತ ರೈತರೊಂದಿಗೆ ಸಭೆ ನಡೆಸಿ, ನಿರ್ಬಂಧಿಸಲಾದ ಹೆದ್ದಾರಿಯನ್ನು ಭಾಗಶಃ ತೆರವುಗೊಳಿಸಲು ಒಪ್ಪಿಗೆ ನೀಡಲಾಗಿದೆ ಎಂದು ಪಂಜಾಬ್ ಸರ್ಕಾರವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ನ್ಯಾಯಪೀಠವು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳನ್ನು ಪ್ರತಿಭಟನಾನಿರತ ರೈತರೊಂದಿಗೆ ತೊಡಗಿಸಿಕೊಳ್ಳಲು ಮತ್ತು ಅವರ ಟ್ರಾಕ್ಟರ್ ಮತ್ತು ಟ್ರಾಲಿಗಳನ್ನು ಹೆದ್ದಾರಿಯಿಂದ ತೆರವುಗೊಳಿಸಲು ಮನವೊಲಿಸುವಂತೆ ಸೂಚಿಸಿದೆ.

ಫೆಬ್ರವರಿ 13 ರಿಂದ ಪ್ರತಿಭಟನಾ ನಿರತ ರೈತರು ಅಂಬಾಲ ಬಳಿಯ ಶಂಭು ಗಡಿಯಲ್ಲಿ ನಿರ್ಮಿಸಿರುವ ಬ್ಯಾರಿಕೇಡ್‌ಗಳನ್ನು ಒಂದು ವಾರದೊಳಗೆ ತೆಗೆದುಹಾಕುವಂತೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಹರಿಯಾಣ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

'ಸಂಯುಕ್ತ ಕಿಸಾನ್ ಮೋರ್ಚಾ' (ರಾಜಕೀಯೇತರ) ಮತ್ತು 'ಕಿಸಾನ್ ಮಜ್ದೂರ್ ಮೋರ್ಚಾ' ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದೆಹಲಿಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿದ ನಂತರ ಹರಿಯಾಣ ಸರ್ಕಾರ ಫೆಬ್ರವರಿಯಲ್ಲಿ ಅಂಬಾಲಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT