ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಹಿಂದೂ ಧರ್ಮಕ್ಕೆ ಯುವತಿ ಮತಾಂತರ, ಪ್ರಕರಣ ದಾಖಲು

ಆಗಸ್ಟ್ 19 ರಂದು ಆ ಯುವತಿ ಹಿಂದೂ ಧರ್ಮಕ್ಕೆ ಮತಾತಂತರಗೊಂಡು ನವಿ ಮುಂಬೈಯ ಸಾಗರ್ ಪ್ರದೀಪ್ ಸಿಂಗ್ ಎಂಬುವರನ್ನು ವಿವಾಹವಾಗಿರುವ ವಿಷಯ ಶುಕ್ರವಾರ ತಿಳಿದುಬಂದಿತ್ತು. ನಂತರ ಬಿಎನ್ ಎಸ್ ನ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಅಪಹರಣ ಪ್ರಕರಣ ದಾಖಲು

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಿಂದ ನಾಪತ್ತೆಯಾಗಿದ್ದ ಯುವತಿ ಸ್ಥಳೀಯರಲ್ಲದ ವ್ಯಕ್ತಿಯನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಆಗಸ್ಟ್ 16 ರ ಬೆಳಿಗ್ಗೆಯಿಂದ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ದೂರುದಾರರು ಉತ್ತರ ಕಾಶ್ಮೀರ ಜಿಲ್ಲೆಯ ಕ್ರೀರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆಗಸ್ಟ್ 19 ರಂದು ಆ ಯುವತಿ ಹಿಂದೂ ಧರ್ಮಕ್ಕೆ ಮತಾತಂತರಗೊಂಡು ನವಿ ಮುಂಬೈಯ ಸಾಗರ್ ಪ್ರದೀಪ್ ಸಿಂಗ್ ಎಂಬುವರನ್ನು ವಿವಾಹವಾಗಿರುವ ವಿಷಯ ಶುಕ್ರವಾರ ತಿಳಿದುಬಂದಿತ್ತು. ನಂತರ ಬಿಎನ್ ಎಸ್ ನ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಅಪಹರಣ ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಆದಾಗ್ಯೂ, ಅನೇಕ ಕಿಡಿಗೇಡಿಗಳು ಮತ್ತು ಸಮಾಜ ವಿರೋಧಿಗಳು ಈ ಘಟನೆಯನ್ನು ಬಳಸಿಕೊಂಡು ಫೋಸ್ಟ್ ಮಾಡುವ ಮೂಲಕ ಗೊಂದಲವನ್ನುಂಟುಮಾಡಲು ಯತ್ನಿಸುತ್ತಿರುವುದು ಕಂಡುಬಂದಿದೆ. ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

"ಈ ಘಟನೆಯ ಬಗ್ಗೆ ತಪ್ಪುದಾರಿಗೆಳೆಯುವ ವಿಷಯವನ್ನು ಹಂಚಿಕೊಳ್ಳದಂತೆ ಎಲ್ಲರಿಗೂ ಸೂಚಿಸಲಾಗಿದೆ. ಅಂತಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿದರೆ ಅವುಗಳನ್ನು ಡಿಲೀಟ್ ಮಾಡಲು ಸಲಹೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT