ಕೋಲ್ಕತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ 
ದೇಶ

Kolkata Rape-Murder: ಘಟನಾ ಸ್ಥಳದ ಸಿಸಿಟಿವಿಯಲ್ಲಿ ಆರೋಪಿ ಸೆರೆ; ಅತ್ಯಾಚಾರಕ್ಕೂ ಮುನ್ನ ಎರಡು ವೇಶ್ಯಾಗೃಹಕ್ಕೆ ಹೋಗಿದ್ದ!

ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖಾಧಿಕಾರಿಗಳು ಶಂಕಿತ ವ್ಯಕ್ತಿ ಮಧ್ಯರಾತ್ರಿಯ ನಂತರ ಅಂದರೆ ಅಪರಾಧ ನಡೆದ ಒಂದು ಗಂಟೆಯ ನಂತರ ಆಸ್ಪತ್ರೆಗೆ ಪ್ರವೇಶಿಸಿದ ಸಿಸಿಟಿವಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ಕೋಲ್ಕತ್ತಾ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಘಟನಾ ಸ್ಥಳದ ಸಿಸಿಟಿವಿಯಲ್ಲಿ ಸೆರೆಯಾಗಿದ್ದಾನೆ.

ಹೌದು.. ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖಾಧಿಕಾರಿಗಳು ಶಂಕಿತ ವ್ಯಕ್ತಿ ಮಧ್ಯರಾತ್ರಿಯ ನಂತರ ಅಂದರೆ ಅಪರಾಧ ನಡೆದ ಒಂದು ಗಂಟೆಯ ನಂತರ ಆಸ್ಪತ್ರೆಗೆ ಪ್ರವೇಶಿಸಿದ ಸಿಸಿಟಿವಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ಶಂಕಿತ ವ್ಯಕ್ತಿಯ ಕುತ್ತಿಗೆಗೆ ಬ್ಲೂಟೂತ್ ಇಯರ್‌ಫೋನ್ ಹಾಕಿಕೊಂಡು ಹೊರಗೆ ಬರುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳೆಯ ಶವ ಪತ್ತೆಯಾದ ನಂತರ ಪ್ರಾಥಮಿಕ ತನಿಖೆಯಲ್ಲಿ ಅಪರಾಧ ನಡೆದ ಸ್ಥಳದಿಂದ ಬ್ಲೂಟೂತ್ ಇಯರ್‌ಫೋನ್‌ಗಳು ಪತ್ತೆಯಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಂಜಯ್ ರಾಯ್ ಮುಂಜಾನೆ 1.03 ಗಂಟೆಗೆ ಆಸ್ಪತ್ರೆಗೆ ಪ್ರವೇಶಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ. ಅಂತೆಯೇ ವಿಚಾರಣೆ ವೇಳೆ ಪೊಲೀಸರು ಆತನಿಗೆ ಇದೇ ಸಿಸಿಟಿವಿ ಸಾಕ್ಷ್ಯವನ್ನು ತೋರಿಸಿದ್ದು, ನಂತರ ಸಂಜಯ್ ರಾಯ್ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೊಲೆಗೂ ಮುನ್ನ ವೇಶ್ಯಾಗೃಹಗಳಿಗೆ ಹೋಗಿದ್ದ ಆರೋಪಿ

ಇನ್ನು ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆಯಾದ ರಾತ್ರಿ 1.03 ಗಂಟೆಗೆ ಆಸ್ಪತ್ರೆ ತಲುಪುವ ಮುನ್ನ ಸಂಜಯ್ ರಾಯ್ ಕೋಲ್ಕತ್ತಾದ ಎರಡು ವೇಶ್ಯಾಗೃಹಗಳಿಗೆ ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಆಗಸ್ಟ್ 8 ರಂದು ರಾತ್ರಿ ರೆಡ್ ಲೈಟ್ ಏರಿಯಾ ಸೋನಾಗಚಿಗೆ ಹೋಗಿ ಮದ್ಯ ಸೇವಿಸಿ ಎರಡು ವೇಶ್ಯಾಗೃಹಗಳಿಗೆ ಒಂದರ ನಂತರ ಒಂದರಂತೆ ಭೇಟಿ ನೀಡಿದ್ದ.

ನಂತರ ಆತ ಮಧ್ಯರಾತ್ರಿ ಆಸ್ಪತ್ರೆಗೆ ಹೋಗಿದ್ದಾನೆ. ಈ ವೇಳೆ ಆತ ಸಂತ್ರಸ್ಥ ಮಹಿಳೆ ಇದ್ದ ಸೆಮಿನಾರ್ ಹಾಲ್‌ಗೆ ಪ್ರವೇಶಿಸುವುದು ಮತ್ತು ಹೊರಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದ್ದು, ಅಲ್ಲಿ ಜೂನಿಯರ್ ವೈದ್ಯರು ಮಲಗಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾದ ವಿಶೇಷ ನ್ಯಾಯಾಲಯ ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆಗೆ ನಿನ್ನೆ ಅನುಮತಿ ನೀಡಿದ್ದು, ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ವೈದ್ಯರಿಗೆ ಆಗಸ್ಟ್ 8-9ರ ಮಧ್ಯರಾತ್ರಿಯಲ್ಲಿ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT