ಪಾರ್ಥಿವ ಶರೀರ 
ದೇಶ

ನೇಪಾಳದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ 25 ಪ್ರವಾಸಿಗರ ಪಾರ್ಥಿವ ಶರೀರ ಜಲಗಾಂವ್‌ಗೆ ಆಗಮನ

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

ಜಲಗಾಂವ್‌: ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿಬಿದ್ದು ಸಂಭವಿಸಿದ ದುರಂತದಲ್ಲಿ ಮಹಾರಾಷ್ಟ್ರದ 25 ಜನರು ಮೃತಪಟ್ಟಿದ್ದರು. ಅವರ ಪಾರ್ಥಿವ ಶರೀರವನ್ನು ಶನಿವಾರ ತಡರಾತ್ರಿ ಜಲಗಾಂವ್ ಗೆ ತರಲಾಯಿತು.

ಭಾರತೀಯ ವಾಯುಪಡೆಯ ವಿಮಾನದ ಮೂಲಕ ನೇಪಾಳದ ಭರತ್ ಪುರದಿಂದ ಜಲಾಗಾಂವ್ ಗೆ ಪಾರ್ಥಿವ ಶರೀರಗಳನ್ನು ಏರ್ ಲಿಫ್ಟ್ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾರಾಷ್ಟ್ರ ಸಚಿವ ಗುಲಾಬ್ರಾವ್ ಪಾಟೀಲ್, ಎಲ್ಲಾರ ಮೃತದೇಹಗಳನ್ನು ತರಲಾಗಿದೆ. ಶೀಘ್ರದಲ್ಲೇ ಅವರ ನಿವಾಸಗಳಿಗೆ ಕೊಂಡೊಯ್ಯಲಾಗುವುದು. ಗಾಯಗೊಂಡವರು ಇನ್ನೂ ನೇಮಪಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ ಎಂದು ತಿಳಿಸಿದರು.

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT