ಪಾರ್ಥಿವ ಶರೀರ 
ದೇಶ

ನೇಪಾಳದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ 25 ಪ್ರವಾಸಿಗರ ಪಾರ್ಥಿವ ಶರೀರ ಜಲಗಾಂವ್‌ಗೆ ಆಗಮನ

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

ಜಲಗಾಂವ್‌: ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿಬಿದ್ದು ಸಂಭವಿಸಿದ ದುರಂತದಲ್ಲಿ ಮಹಾರಾಷ್ಟ್ರದ 25 ಜನರು ಮೃತಪಟ್ಟಿದ್ದರು. ಅವರ ಪಾರ್ಥಿವ ಶರೀರವನ್ನು ಶನಿವಾರ ತಡರಾತ್ರಿ ಜಲಗಾಂವ್ ಗೆ ತರಲಾಯಿತು.

ಭಾರತೀಯ ವಾಯುಪಡೆಯ ವಿಮಾನದ ಮೂಲಕ ನೇಪಾಳದ ಭರತ್ ಪುರದಿಂದ ಜಲಾಗಾಂವ್ ಗೆ ಪಾರ್ಥಿವ ಶರೀರಗಳನ್ನು ಏರ್ ಲಿಫ್ಟ್ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾರಾಷ್ಟ್ರ ಸಚಿವ ಗುಲಾಬ್ರಾವ್ ಪಾಟೀಲ್, ಎಲ್ಲಾರ ಮೃತದೇಹಗಳನ್ನು ತರಲಾಗಿದೆ. ಶೀಘ್ರದಲ್ಲೇ ಅವರ ನಿವಾಸಗಳಿಗೆ ಕೊಂಡೊಯ್ಯಲಾಗುವುದು. ಗಾಯಗೊಂಡವರು ಇನ್ನೂ ನೇಮಪಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ ಎಂದು ತಿಳಿಸಿದರು.

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!