ಪಾರ್ಥಿವ ಶರೀರ 
ದೇಶ

ನೇಪಾಳದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ 25 ಪ್ರವಾಸಿಗರ ಪಾರ್ಥಿವ ಶರೀರ ಜಲಗಾಂವ್‌ಗೆ ಆಗಮನ

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

ಜಲಗಾಂವ್‌: ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿಬಿದ್ದು ಸಂಭವಿಸಿದ ದುರಂತದಲ್ಲಿ ಮಹಾರಾಷ್ಟ್ರದ 25 ಜನರು ಮೃತಪಟ್ಟಿದ್ದರು. ಅವರ ಪಾರ್ಥಿವ ಶರೀರವನ್ನು ಶನಿವಾರ ತಡರಾತ್ರಿ ಜಲಗಾಂವ್ ಗೆ ತರಲಾಯಿತು.

ಭಾರತೀಯ ವಾಯುಪಡೆಯ ವಿಮಾನದ ಮೂಲಕ ನೇಪಾಳದ ಭರತ್ ಪುರದಿಂದ ಜಲಾಗಾಂವ್ ಗೆ ಪಾರ್ಥಿವ ಶರೀರಗಳನ್ನು ಏರ್ ಲಿಫ್ಟ್ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾರಾಷ್ಟ್ರ ಸಚಿವ ಗುಲಾಬ್ರಾವ್ ಪಾಟೀಲ್, ಎಲ್ಲಾರ ಮೃತದೇಹಗಳನ್ನು ತರಲಾಗಿದೆ. ಶೀಘ್ರದಲ್ಲೇ ಅವರ ನಿವಾಸಗಳಿಗೆ ಕೊಂಡೊಯ್ಯಲಾಗುವುದು. ಗಾಯಗೊಂಡವರು ಇನ್ನೂ ನೇಮಪಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ ಎಂದು ತಿಳಿಸಿದರು.

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT