ಬಿಜೆಪಿ online desk
ದೇಶ

ಜಮ್ಮು-ಕಾಶ್ಮೀರ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ತಕ್ಷಣವೇ ಹಿಂಪಡೆದ ಬಿಜೆಪಿ!

90 ವಿಧಾನಸಭಾ ಕ್ಷೇತ್ರಗಳಿಗೆ 3 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬೆಳಿಗ್ಗೆ ಘೋಷಿಸಿತ್ತು.

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ತಕ್ಷಣವೇ ಅದನ್ನು ಹಿಂಪಡೆದಿದೆ.

90 ವಿಧಾನಸಭಾ ಕ್ಷೇತ್ರಗಳಿಗೆ 3 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬೆಳಿಗ್ಗೆ ಘೋಷಿಸಿತ್ತು. ಅಭ್ಯರ್ಥಿಗಳ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಬಿಜೆಪಿ ಅದನ್ನು ತಕ್ಷಣವೇ ಡಿಲೀಟ್ ಮಾಡಿದೆ. ಹೊಸ ಪಟ್ಟಿ ಶೀಘ್ರವೇ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಈಗ ಡಿಲೀಟ್ ಮಾಡಲಾದ ಪಟ್ಟಿಯಲ್ಲಿ 3 ಪ್ರಮುಖ ಹೆಸರುಗಳು ಕಾಣೆಯಾಗಿವೆ. ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ, ಮತ್ತು ಮಾಜಿ ಉಪಮುಖ್ಯಮಂತ್ರಿಗಳಾದ ನಿರ್ಮಲ್ ಸಿಂಗ್ ಮತ್ತು ಕವಿಂದರ್ ಗುಪ್ತಾ ಅವರ ಹೆಸರುಗಳು ಕಾಣೆಯಾಗಿದ್ದು. ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಸಹೋದರ ದೇವೇಂದ್ರ ರಾಣಾ ಅವರ ಹೆಸರು ಸಹ ಇತ್ತು. ಅವರು ನ್ಯಾಷನಲ್ ಕಾನ್ಫರೆನ್ಸ್‌ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಮೊದಲ ಪಟ್ಟಿಯಲ್ಲಿ ಇಬ್ಬರು ಕಾಶ್ಮೀರಿ ಪಂಡಿತರು 14 ಮುಸ್ಲಿಂ ಅಭ್ಯರ್ಥಿಗಳ ಹೆಸರೂ ಇತ್ತು. ಈಗ ಡಿಲೀಟ್ ಮಾಡಲಾದ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ನಾಯಕರ ಹೆಸರುಗಳ ಪೈಕಿ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಮತ್ತು ಪ್ಯಾಂಥರ್ಸ್ ಪಾರ್ಟಿಯ ಹಲವು ಮಾಜಿ ನಾಯಕರು ಪಕ್ಷ ಬದಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ನಾಯಕರ ಹೆಸರುಗಳೂ ಇದ್ದವು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 19, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ. 2019 ರಲ್ಲಿ ಆರ್ಟಿಕಲ್ 370 ರದ್ದುಗೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಯುತ್ತಿದೆ. 2014 ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಕೊನೆಯದಾಗಿ ವಿಧಾನಸಭಾ ಚುನಾವಣೆಗಳು ನಡೆದಿದ್ದವು. ಬಿಜೆಪಿ 25 ಸ್ಥಾನಗಳಲ್ಲಿ ಗೆದ್ದಿದ್ದರೆ, ಪಿಡಿಪಿ 28, ಎನ್ ಸಿ 15, ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT