ಸಾಂದರ್ಭಿಕ ಚಿತ್ರ 
ದೇಶ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು

ಇಂದು ಬೆಳಗ್ಗೆ ನಾಲಾ ಅಂಚಿನಲ್ಲಿ ಚಿರತೆಯೊಂದು ಮೃತಪಟ್ಟಿರುವುದು ಪತ್ತೆಯಾಗಿದೆ. ಈ ಚೀತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ.

ಭೋಪಾಲ್: ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ(ಕೆಎನ್‌ಪಿ) ನಮೀಬಿಯಾದಿಂದ ತಂದ ಚೀತಾಗಳ ಸಾವಿನ ಸರಣಿ ಮುಂದುವರೆದಿದ್ದು, ಮಂಗಳವಾರ ಬೆಳಗ್ಗೆ ಗಂಡು ಚೀತಾ ಪವನ್ ನೀರಿನಲ್ಲಿ ಮುಳಗಿ ಮೃತಪಟ್ಟಿದೆ. ಇದರೊಂದಿಗೆ ಮಾರ್ಚ್ 2023 ರಿಂದ KNP ಯಲ್ಲಿ ಸಾವನ್ನಪ್ಪಿದ ಎಂಟನೇ ಆಫ್ರಿಕನ್ ಚಿರತೆಯಾಗಿದೆ.

ಇಂದು ಬೆಳಗ್ಗೆ ನಾಲಾ ಅಂಚಿನಲ್ಲಿ ಚಿರತೆಯೊಂದು ಮೃತಪಟ್ಟಿರುವುದು ಪತ್ತೆಯಾಗಿದೆ. ಈ ಚೀತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ.

ರಾಜ್ಯ ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ, ಮಂಗಳವಾರ ಬೆಳಗ್ಗೆ 10.30 ರ ಸುಮಾರಿಗೆ ನಮೀಬಿಯಾದ ಗಂಡು ಚಿರತೆ ಪವನ್ ಯಾವುದೇ ಚಲನವಲನವಿಲ್ಲದೆ ಪೊದೆಗಳ ನಡುವೆ ನಾಲಾ ಅಂಚಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಮಳೆಯಿಂದಾಗಿ ನಾಲಾ ತುಂಬಿ ಹರಿಯುತ್ತಿದೆ.

ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಲಾಗಿದ್ದು, ಸೂಕ್ಷ್ಮವಾಗಿ ಪರಿಶೀಲಿಸಿದಾಗ, ತಲೆ ಸೇರಿದಂತೆ ದೇಹದ ಮುಂಭಾಗದ ಅರ್ಧ ಭಾಗವು ನೀರಿನೊಳಗೆ ಇರುವುದು ಕಂಡುಬಂದಿದೆ ಮತ್ತು ದೇಹದ ಮೇಲೆ ಎಲ್ಲಿಯೂ ಗಾಯಗಳು ಕಂಡುಬಂದಿಲ್ಲ. ಹೀಗಾಗಿ ಚೀತಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

ಉಳಿದಿರುವ 13 ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದ ಚೀತಾಗಳಲ್ಲಿ ಪವನ್ ಏಕೈಕ ವಯಸ್ಕ ಚಿರತೆಯಾಗಿದ್ದು, ಕಳೆದ 7-8 ತಿಂಗಳುಗಳಿಂದ ಅರಣ್ಯಕ್ಕೆ ಬಿಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT